ಡೆಹ್ರಾಡೂನ್: ಹನುಮ ಜಯಂತಿಯ ಪ್ರಯುಕ್ತ ಶನಿವಾರ ಸಂಜೆ ನಡೆದ ಮೆರವಣಿಗೆ ಮೇಲೆ ಕಲ್ಲು ತೂರಾಟ ಮಾಡಿದ ಘಟನೆ ಉತ್ತರಾಖಂಡದ ಹರಿದ್ವಾರ ಜಿಲ್ಲೆಯಲ್ಲೂ ನಡೆದಿದ್ದು, ನಾಲ್ವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಘಟನೆ ಸಂಬಂಧ 13 ಮಂದಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, 9 ಮಂದಿಯನ್ನು ಬಂಧಿಸಿದ್ದಾರೆ.
ಹರಿದ್ವಾರ ಜಿಲ್ಲೆಯ ರೂರ್ಕಿ ಬಳಿಯ ಭಗವಾನ್ಪುರದಲ್ಲಿ ಹನುಮ ಜಯಂತಿಯ ಮೆರವಣಿಗೆ ಆಗಮಿಸುತ್ತಿದ್ದಂತೆ, ಮನೆಗಳ ಮೇಲೆ ನಿಂತಿದ್ದವರು ಕಲ್ಲು ತೂರಾಟ ನಡೆಸಿದ್ದಾರೆ. ಈ ವೇಳೆ ಮೆರವಣಿಗೆಯಲ್ಲಿ ಭಾಗಿಯಾಗಿದ್ದವರು ಕಕ್ಕಾಬಿಕ್ಕಿಯಾಗಿ ಓಡಿದ್ದರಿಂದ ಕಾಲ್ತುಳಿತದ ರೀತಿಯ ಘಟನೆಯೂ ನಡೆದಿದೆ. ಈ ವೇಳೆ ಸ್ಥಳಕ್ಕೆ ಬಂದ ಪೊಲೀಸರು, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.