ಅಹಮದಾಬಾದ್: ಗುಜರಾತಿನ ಸುರೇಂದ್ರನಗರ್ನಲ್ಲಿ ಶುಕ್ರವಾರ ನಡೆದ ಜನ್ ಆಕ್ರೋಶ್ ರ್ಯಾಲಿಯಲ್ಲಿ ವ್ಯಕ್ತಿಯೊಬ್ಬರು ಕಾಂಗ್ರೆಸ್ ನಾಯಕ ಹಾರ್ದಿಕ್ ಪಟೇಲ್ಗೆ ಕಪಾಳ ಮೋಕ್ಷ ಮಾಡಿದ್ದಾರೆ.
ಹಾರ್ದಿಕ್ ಪಟೇಲ್ ಇತ್ತೀಚೆಗೆ ಕಾಂಗ್ರೆಸ್ ಪಕ್ಷಕ್ಕೆಸೇರಿದ್ದರು.ರ್ಯಾಲಿಯಲ್ಲಿ ಜನರನ್ನುದ್ದೇಶಿಸಿ ಮಾತನಾಡುತ್ತಿದ್ದ ವೇಳೆ ವೇದಿಕೆಗೆ ಏರಿ ಬಂದ ವ್ಯಕ್ತಿಯೊಬ್ಬರು ಹಾರ್ದಿಕ್ ಪಟೇಲ್ ಕೆನ್ನೆಗೆ ಬಾರಿಸಿದ್ದಾರೆ. ಕೆನ್ನೆಗೆ ಹೊಡೆದ ನಂತರ ಆ ವ್ಯಕ್ತಿ ಪಟೇಲ್ ಜಗಳವಾಡುತ್ತಿರುವುದು ವಿಡಿಯೊ ದೃಶ್ಯದಲ್ಲಿದೆ.
ಹಾರ್ದಿಕ್ ಪಟೇಲ್ ಮೇಲೆ ಹಲ್ಲೆ ನಡೆಸಿದ ವ್ಯಕ್ತಿ ವಿರುದ್ದ ದೂರು ದಾಖಲಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.