ರಾಂಚಿ (ಪಿಟಿಐ): ಮೇವು ಹಗರಣಕ್ಕೆ ಸಂಬಂಧಿಸಿ ಡೊರಾಂಡ ಖಜಾನೆ ಪ್ರಕರಣದಲ್ಲಿ ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಅವರಿಗೆ ಜಾರ್ಖಂಡ್ ಹೈಕೋರ್ಟ್ ಶುಕ್ರವಾರ ಜಾಮೀನು ನೀಡಿದೆ. ಸಿಬಿಐ ವಿಶೇಷ ನ್ಯಾಯಾಲಯ ಈ ಪ್ರಕರಣದಲ್ಲಿ ಲಾಲು ಪ್ರಸಾದ್ ಅವರಿಗೆ ಐದು ವರ್ಷ ಸಜೆ ವಿಧಿಸಿತ್ತು.
73 ವರ್ಷದ ಲಾಲು ಪ್ರಸಾದ್ ಫೆಬ್ರುವರಿಯಿಂದ ಜೈಲಿನಲ್ಲಿದ್ದಾರೆ. ಹೈಕೋರ್ಟ್ ಆದೇಶದ ಮಾಹಿತಿ ಕೆಳಹಂತದ ಕೋರ್ಟ್ಗೆ ಮಂಗಳವಾರ ತಲುಪಬಹುದು. ಬಳಿಕ ನಾವು ಜಾಮೀನು ಬಾಂಡ್ ಸಲ್ಲಿಸಿ ಬಿಡುಗಡೆಗೆ ಕ್ರಮವಹಿಸುತ್ತೇವೆ ಎಂದು ವಕೀಲ ಪ್ರಭಾತ್ ಕುಮಾರ್ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.