ADVERTISEMENT

ಹಾಥರಸ್ ಅತ್ಯಾಚಾರ ಪ್ರಕರಣ: ಎಸ್‌ಪಿ ಸೇರಿ ನಾಲ್ವರು ಪೊಲೀಸರ ಅಮಾನತು

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2020, 1:23 IST
Last Updated 3 ಅಕ್ಟೋಬರ್ 2020, 1:23 IST
ಪೊಲೀಸರಿಂದ ಸಂತ್ರಸ್ತೆಯ ಶವಸಂಸ್ಕಾರ
ಪೊಲೀಸರಿಂದ ಸಂತ್ರಸ್ತೆಯ ಶವಸಂಸ್ಕಾರ   

ಲಖನೌ: ಹಾಥರಸ್ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಥರಸ್ ಜಿಲ್ಲೆಯ ಪೊಲೀಸ್‌ ವರಿಷ್ಠಾಧಿಕಾರಿ (ಎಸ್‌ಪಿ) ವಿಕ್ರಾಂತ್ ವೀರ್ ಸೇರಿದಂತೆ ನಾಲ್ವರು ಪೊಲೀಸರನ್ನು ಉತ್ತರ ಪ್ರದೇಶ ಸರ್ಕಾರ ಅಮಾನತು ಮಾಡಿದೆ.

ಘಟನೆಯ ತನಿಖೆ ನಡೆಸುತ್ತಿರುವ ಎಸ್‌ಐಟಿ ಶುಕ್ರವಾರ ಪ್ರಾಥಮಿಕ ವರದಿ ನೀಡಿದ್ದು, ಇದರ ಆಧಾರದ ಮೇಲೆ ಹಾಥರಸ್ ಎಸ್‌ಪಿ ವಿಕ್ರಾಂತ್ ವೀರ್ ಹಾಗೂ ನಾಲ್ವರು ಪೊಲೀಸರನ್ನು ಅಮಾನತು ಮಾಡಲಾಗಿದೆ.

ವಿನೀತ್ ಜೈಸ್ವಾಲ್ ಅವರನ್ನು ಹಾಥರಸ್‌ ಎಸ್‌ಪಿ ಆಗಿ ನಿಯೋಜಿಸಲಾಗಿದೆ ಎಂದು ಸರ್ಕಾರದ ಮುಖ್ಯಕಾರ್ಯದರ್ಶಿ ಅವನೀಶ್ ಅವಸ್ಥಿ ತಿಳಿಸಿದ್ದಾರೆ.

ADVERTISEMENT

ದೆಹಲಿ ಸೇರಿದಂತೆ ದೇಶದಾದ್ಯಂತ ಸಂತ್ರಸ್ತೆಗೆ ನ್ಯಾಯಕ್ಕಾಗಿ ವಿವಿಧ ಪಕ್ಷಗಳು ಹಾಗೂ ಸಂಘಟನೆಗಳ ಸದಸ್ಯರು ಶುಕ್ರವಾರ ಭಾರಿ ಪ್ರತಿಭಟನೆ ನಡೆಸಿದ್ದಾರೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.