ನವದೆಹಲಿ : ಹಣ ಅಕ್ರಮ ವರ್ಗಾವಣೆ ತಡೆಕಾಯ್ದೆಯಡಿ ದಾಖಲಿಸಿರುವ ದೂರಿನಲ್ಲಿರುವ ಕೆಲವು ಅಂಶಗಳನ್ನು ರದ್ದುಗೊಳಿಸಬೇಕು ಎಂದು ಕೋರಿ ಸಲ್ಲಿಸಿದ ಅರ್ಜಿಗೆಜಾರಿ ನಿರ್ದೇಶನಾಲಯ (ಇ.ಡಿ) ಕೊಟ್ಟಿರುವ ಉತ್ತರಕ್ಕೆ ಸ್ಪಷ್ಟನೆ ಕೊಡಲು ರಾಬರ್ಟ್ ವಾದ್ರಾ ಅವರಿಗೆ ದೆಹಲಿ ಹೈಕೋರ್ಟ್ ನಾಲ್ಕು ವಾರಗಳ ಕಾಲಾವಕಾಶವನ್ನು ಬುಧವಾರ ನೀಡಿದೆ.
ನ್ಯಾಯಮೂರ್ತಿಗಳಾದ ಮನ್ಮೋಹನ್ ಮತ್ತು ಸಂಗೀತಾ ಧಿಂಗ್ರಾ ಸೆಹಗಲ್ ಅವರಿದ್ದ ಪೀಠವು, ಕಾಲಾವಕಾಶ ನೀಡಿ ನವೆಂಬರ್ 18ಕ್ಕೆ ವಿಚಾರಣೆಯನ್ನು ಮುಂದೂಡಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.