ADVERTISEMENT

ಕೋವಿಡ್‌ ಔಷಧಗಳ ಕುರಿತು ಹೇಳಿಕೆ; ಬಾಬಾ ರಾಮ್‌ದೇವ್‌ಗೆ ದೆಹಲಿ ಹೈಕೋರ್ಟ್‌ ಸಮನ್ಸ್

ಪಿಟಿಐ
Published 3 ಜೂನ್ 2021, 10:23 IST
Last Updated 3 ಜೂನ್ 2021, 10:23 IST
ಬಾಬಾ ರಾಮ್‌ದೇವ್‌ ಹೇಳಿಕೆಗಳನ್ನು ವಿರೋಧಿಸಿ ದೆಹಲಿಯಲ್ಲಿ ವೈದ್ಯರು ಪ್ರತಿಭಟನೆ ನಡೆಸಿರುವುದು–ಸಾಂದರ್ಭಿಕ ಚಿತ್ರ
ಬಾಬಾ ರಾಮ್‌ದೇವ್‌ ಹೇಳಿಕೆಗಳನ್ನು ವಿರೋಧಿಸಿ ದೆಹಲಿಯಲ್ಲಿ ವೈದ್ಯರು ಪ್ರತಿಭಟನೆ ನಡೆಸಿರುವುದು–ಸಾಂದರ್ಭಿಕ ಚಿತ್ರ   

ನವದೆಹಲಿ: ಕೊರೊನಿಲ್‌ ಕಿಟ್‌ ಸುಳ್ಳು ಹೇಳಿಕೆ ನೀಡುವುದನ್ನು ತಡೆಯಬೇಕು ಎಂದು ಕೋರಿ ಸಲ್ಲಿಕೆಯಾಗಿರುವ ಅರ್ಜಿಗೆ ಸಂಬಂಧಿಸಿದಂತೆ ಯೋಗ ಗುರು ಬಾಬಾ ರಾಮ್‌ದೇವ್‌ ಅವರಿಗೆ ದೆಹಲಿ ಹೈಕೋರ್ಟ್ ಗುರುವಾರ ಸಮನ್ಸ್‌ ಜಾರಿಗೊಳಿಸಿದೆ.

ದೆಹಲಿ ಮೆಡಿಕಲ್‌ ಅಸೋಸಿಯೇಷನ್‌ (ಡಿಎಂಎ) ಈ ಅರ್ಜಿ ಸಲ್ಲಿಸಿದೆ. ಹೈಕೋರ್ಟ್‌ ವಿಚಾರಣೆಯನ್ನು ಜುಲೈ 13ಕ್ಕೆ ಮುಂದೂಡಿತು. ಅಲ್ಲಿಯವರೆಗೆ ಯಾವುದೇ ರೀತಿಯ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಬಾರದು ಎಂದು ರಾಮ್‌ದೇವ್‌ ಅವರಿಗೆ ತಿಳಿಸುವಂತೆ ಅವರ ಪರ ವಕೀಲರಿಗೆ ಹೈಕೋರ್ಟ್‌ ಮೌಖಿಕವಾಗಿ ಸೂಚಿಸಿತು.

ಔಷಧಗಳು ಕೋವಿಡ್‌ ಅನ್ನು ಗುಣಪಡಿಸುವುದಿಲ್ಲ ಎಂದು ರಾಮ್‌ದೇವ್‌ ಅವರು ಹೇಳಿರುವುದು ಸರಿಯಲ್ಲ. ಇದು ಜನರನ್ನು ದಾರಿ ತಪ್ಪಿಸುತ್ತದೆ ಎಂದು ಡಿಎಂಎ ಹೇಳಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.