ADVERTISEMENT

ಸಿಖ್‌ ಗಲಭೆ; ಅಪರಾಧಿಗಳಿಗೆ ಗಲ್ಲುಶಿಕ್ಷೆ: ಕುಶ್ವಾಹ ರಾಜೀನಾಮೆ ಅಂಗೀಕಾರ

ಪಿಟಿಐ
Published 11 ಡಿಸೆಂಬರ್ 2018, 18:08 IST
Last Updated 11 ಡಿಸೆಂಬರ್ 2018, 18:08 IST
ಉಪೇಂದ್ರ ಕುಶ್ವಾಹ
ಉಪೇಂದ್ರ ಕುಶ್ವಾಹ   

ನವದೆಹಲಿ: 1984ರ ಸಿಖ್‌ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಗಲ್ಲುಶಿಕ್ಷೆಗೆ ಒಳಗಾಗಿರುವ ಯಶ್‌ಪಾಲ್‌ಸಿಂಗ್‌ ಜಾಮೀನು ಅರ್ಜಿಗೆ ಸಂಬಂಧಿಸಿದಂತೆ ಅಭಿಪ್ರಾಯ ತಿಳಿಸುವಂತೆ ಇಲ್ಲಿನ ಪೊಲೀಸರಿಗೆ ದೆಹಲಿ ಹೈಕೋರ್ಟ್‌ ಸೂಚನೆ ನೀಡಿದೆ.

ವಿಚಾರಣಾ ನ್ಯಾಯಾಲಯ ನೀಡಿದ ಗಲ್ಲುಶಿಕ್ಷೆಯನ್ನು ಪ್ರಶ್ನಿಸಿ ಅಪರಾಧಿ ಯಶ್‌ಪಾಲ್‌ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು, ಅಲ್ಲದೇ ಜಾಮೀನು ನೀಡುವಂತೆ ಮನವಿ ಮಾಡಿದ್ದರು.

ಅರ್ಜಿ ವಿಚಾರಣೆ ನಡೆಸಿದ ಸಿದ್ಧಾರ್ಥ್‌ ಮೃದುಲ್‌, ಸಂಗೀತಾ ಧಿಂಗ್ರಾ ನೇತೃತ್ವದ ನ್ಯಾಯಪೀಠ, ಈ ಸಂಬಂಧ ಪೊಲೀಸರಿಗೆ ನೋಟಿಸ್‌ ಜಾರಿಗೊಳಿಸಿತು. ಅಲ್ಲದೇ ಪ್ರಕರಣದ ವಿಚಾರಣೆಯನ್ನು ಡಿಸೆಂಬರ್‌ 19ಕ್ಕೆ ಮುಂದೂಡಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.