ಲಖನ್: ‘ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ’ ಎಂದು ಸಂಜಯ್ ಗಾಂಧಿ ವೈದ್ಯಕೀಯ ವಿಜ್ಞಾನಗಳ ಸ್ನಾತಕೋತ್ತರ ಸಂಸ್ಥೆಯು (ಎಸ್ಜಿಪಿಜಿಐಎಂಎಸ್) ಭಾನುವಾರ ಹೇಳಿದೆ.
ರಾಜಸ್ಥಾನದ ಮಾಜಿ ರಾಜ್ಯಪಾಲರೂ ಆಗಿರುವ ಕಲ್ಯಾಣ್ ಸಿಂಗ್(89) ಅವರು ಸೋಂಕು ಮತ್ತಿತರ ಆರೋಗ್ಯ ಸಮಸ್ಯೆಯಿಂದಾಗಿ ಜುಲೈ 4 ರಂದು ಆಸ್ಪತ್ರೆಗೆ ದಾಖಲಾಗಿದ್ದರು.
‘ಸಿಸಿಎಂ, ಹೃದ್ರೋಗ, ನರರೋಗ, ನೆಪ್ರೊಲಜಿ ಸೇರಿದಂತೆ ವಿವಿಧ ವಿಭಾಗಗಳ ತಜ್ಞರು ಅವರ ಆರೋಗ್ಯದ ಮೇಲೆ ನಿಗಾ ವಹಿಸಿದ್ದಾರೆ.
‘ಕಲ್ಯಾಣ್ ಸಿಂಗ್ ಅವರಿಗೆ ಮಂಗಳವಾರ ಸಂಜೆಯಿಂದ ಕೃತಕ ಉಸಿರಾಟ ವ್ಯವಸ್ಥೆ ಅಳವಡಿಸಲಾಗಿದೆ. ಆದರೆ, ಇದುವರೆಗೆ ಚೇತರಿಕೆ ಕಂಡು ಬಂದಿಲ್ಲ’ ಎಂದು ಹಿರಿಯ ವೈದ್ಯರು ತಿಳಿಸಿದ್ದಾರೆ.
ಎಸ್ಜಿಪಿಜಿಐಎಂಎಸ್ ನಿರ್ದೇಶಕರಾದ ಆರ್.ಕೆ ಧಿಮನ್ ಅವರು ಕಲ್ಯಾಣ್ ಸಿಂಗ್ ಅವರಿಗೆ ನೀಡುತ್ತಿರುವ ಚಿಕಿತ್ಸೆ ಮೇಲೆ ನಿಗಾ ಇಟ್ಟಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.