ನವದೆಹಲಿ: ‘ಭಾರತದಲ್ಲಿ ಕೋವಿಡ್–19ನಿಂದ ಗುಣಮುಖರಾದವರ ಪ್ರಮಾಣವು ಶೇಕಡ 78.28ಕ್ಕೆ ಏರಿಕೆಯಾಗಿದೆ. ಇದುವರೆಗೂ ಒಟ್ಟು 38.59 ಲಕ್ಷ ಮಂದಿ ಚೇತರಿಸಿಕೊಂಡಿದ್ದಾರೆ’ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ಮಂಗಳವಾರ ತಿಳಿಸಿದೆ.
‘ದೇಶದಲ್ಲಿ ಒಟ್ಟು 9.90 ಲಕ್ಷ ಸಕ್ರಿಯ ಪ್ರಕರಣಗಳಿದ್ದು ಇದರಲ್ಲಿ ಮಹಾರಾಷ್ಟ್ರ, ಕರ್ನಾಟಕ, ಆಂಧ್ರಪ್ರದೇಶ, ಉತ್ತರ ಪ್ರದೇಶ ಹಾಗೂ ತಮಿಳುನಾಡು ರಾಜ್ಯಗಳ ಪಾಲು ಶೇಕಡ 60.35ರಷ್ಟಿದೆ. ಚೇತರಿಕೆಯ ಪ್ರಮಾಣದಲ್ಲಿ ಈ ರಾಜ್ಯಗಳ ಪಾಲು ಶೇ 59.42’ ಎಂದು ಸಚಿವಾಲಯ ಹೇಳಿದೆ.
ಮಂಗಳವಾರ ಬೆಳಿಗ್ಗೆ 8 ಗಂಟೆವರೆಗಿನ ಹಿಂದಿನ 24 ತಾಸುಗಳಲ್ಲಿ ಒಟ್ಟು 1,054 ಮಂದಿ ಮೃತರಾಗಿದ್ದಾರೆ. ಸಾವಿಗೀಡಾದವರ ಪ್ರಮಾಣದಲ್ಲಿ ಮಹಾರಾಷ್ಟ್ರ, ತಮಿಳುನಾಡು, ಕರ್ನಾಟಕ, ಆಂಧ್ರಪ್ರದೇಶ ಹಾಗೂ ನವದೆಹಲಿಯ ಪಾಲು ಅಂದಾಜು ಶೇ 69ರಷ್ಟಿದೆ.
‘ಮಹಾರಾಷ್ಟ್ರದಲ್ಲೇ ಅತಿ ಹೆಚ್ಚು ಜನ ಕೋವಿಡ್ನಿಂದ ಮೃತಪಟ್ಟಿದ್ದಾರೆ. ಈ ರಾಜ್ಯದಲ್ಲಿ ಇದುವರೆಗೂ 29,894 ಮಂದಿ ಸತ್ತಿದ್ದಾರೆ. ಈ ರಾಜ್ಯದಲ್ಲಿ ಹಿಂದಿನ 24 ತಾಸುಗಳಲ್ಲಿ 363 ಮಂದಿ ಕೋವಿಡ್ಗೆ ಬಲಿಯಾಗಿದ್ದಾರೆ’ ಎಂದೂ ಸಚಿವಾಲಯ ಮಾಹಿತಿ ನೀಡಿದೆ.
ಸಚಿವಾಲಯ ಬಿಡುಗಡೆ ಮಾಡಿರುವ ಅಂಕಿ ಅಂಶಗಳ ಪ್ರಕಾರಹಿಂದಿನ 24 ಗಂಟೆಗಳಲ್ಲಿ ಹೊಸದಾಗಿ ಒಟ್ಟು 83,809 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ಖಚಿತಪಟ್ಟಿದೆ. ಇದರೊಂದಿಗೆ ಸೋಂಕಿತರ ಒಟ್ಟು ಸಂಖ್ಯೆಯು 49.30 ಲಕ್ಷದ ಗಡಿ ದಾಟಿದೆ. ಕೋವಿಡ್ನಿಂದ ಮೃತರಾದವರ ಸಂಖ್ಯೆಯು 80,776ಕ್ಕೆ ಹೆಚ್ಚಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.