ADVERTISEMENT

ಮುಂಬೈನಲ್ಲಿ ಭಾರಿ ಮಳೆ, ನೀರು ನುಗ್ಗಿ ಜನಜೀವನ ಅಸ್ತವ್ಯಸ್ತ, 2ದಿನ ಆರೆಂಜ್ ಅಲರ್ಟ್

ಏಜೆನ್ಸೀಸ್
Published 3 ಜುಲೈ 2020, 16:57 IST
Last Updated 3 ಜುಲೈ 2020, 16:57 IST
ಮುಂಬಯಿಯಲ್ಲಿ ಶುಕ್ರವಾರ ಭಾರಿ ಮಳೆ ಬಿದ್ದ ಕಾರಣ ಜನಜೀವನ ಅಸ್ತವ್ಯಸ್ತಗೊಂಡಿದೆ
ಮುಂಬಯಿಯಲ್ಲಿ ಶುಕ್ರವಾರ ಭಾರಿ ಮಳೆ ಬಿದ್ದ ಕಾರಣ ಜನಜೀವನ ಅಸ್ತವ್ಯಸ್ತಗೊಂಡಿದೆ   
"ಮುಂಬೈನಗರದಲ್ಲಿ ಬೇರೆ ಸ್ಥಳಗಳಿಗೆ ಹೊರಡಲು ಮನೆಯಿಂದ ಹೊರಟವರು ಮಳೆಯಿಂದಾಗಿ ಬಸ್ ನಿಲ್ದಾಣದಲ್ಲಿಯೇ ಸಿಲುಕಿರುವುದು"

ಮುಂಬೈ (ಮಹಾರಾಷ್ಟ್ರ): ನಗರದಲ್ಲಿ ಶುಕ್ರವಾರ ಭಾರಿ ಮಳೆಯಾಗಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಮುಂದಿನ ಎರಡು ದಿನಗಳ ಕಾಲ ಮಹಾರಾಷ್ಟ್ರ ಸರ್ಕಾರ ಆರೆಂಜ್ ಅಲರ್ಟ್ ಘೋಷಿಸಿದೆ.

ಮಹಾರಾಷ್ಟ್ರಕ್ಕೆ ಮುಂಗಾರು ಪ್ರವೇಶಿಸಿದ್ದು ಬೆಳಗ್ಗೆಯಿಂದಲೇ ಮಳೆ ಬೀಳಲು ಆರಂಭಿಸಿತ್ತು. ಮಧ್ಯಾಹ್ನದ ನಂತರ ಭಾರಿ ಮಳೆಯಾದ ಕಾರಣ ಮುಂಬೈ ಸಂಪೂರ್ಣಅಸ್ತವ್ಯಸ್ತಗೊಂಡಿದೆ. ಕೆಲ ತಗ್ಗುಪ್ರದೇಶಗಳಲ್ಲಿ ಇರುವ ಮನೆಗಳಿಗೆ ನೀರು ನುಗ್ಗಿ ಜನರು ಪರದಾಡುವಂತಾಗಿದೆ.

ಪಾಲಿಕೆ ಸಿಬ್ಬಂದಿ ಸುಮಾರು 300ಕ್ಕೂ ಹೆಚ್ಚು ಮೋಟಾರ್ ಪಂಪ್‌ಗಳನ್ನು ಬಳಸಿ ವಿವಿಧ ಪ್ರದೇಶಗಳಲ್ಲಿ ಮನೆಗಳಿಗೆ ನುಗ್ಗಿರುವ ನೀರನ್ನು ಹೊರತೆಗೆದಿದ್ದಾರೆ.

ADVERTISEMENT
ಮುಂಬೈನಗರದಲ್ಲಿ ಬೇರೆ ಸ್ಥಳಗಳಿಗೆ ಹೊರಡಲು ಮನೆಯಿಂದ ಹೊರಟವರು ಮಳೆಯಿಂದಾಗಿ ಬಸ್ ನಿಲ್ದಾಣದಲ್ಲಿಯೇ ಸಿಲುಕಿರುವುದು

ನಗರದ ಪ್ರಮುಖ ಪ್ರದೇಶಗಳಾದ ಗಾಂಧಿ ಮಾರ್ಕೆಟ್, ಅಂದೇರಿ, ಕೊಲಬಾ, ಕುರ್ಲಾ, ಸಿಯಾನ್, ಹಿಂದ್ ಮಾತಾ ಪ್ರದೇಶದಲ್ಲಿ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಅಂದೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪೊಲೀಸರು ವಿವಿಧ ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧಿಸಿದ್ದಾರೆ.

ಕೊರೊನಾದಿಂದ ಸಮಸ್ಯೆಗೆ ಸಿಲುಕಿರುವ ಮುಂಬೈ ನಗರಕ್ಕೆ ಮಳೆ ಮತ್ತೊಂದು ಅವಾಂತರ ಸೃಷ್ಟಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.