ADVERTISEMENT

ಅರುಣಾಚಲ ಪ್ರದೇಶದಲ್ಲಿ ಮಳೆ, ಭೂಕುಸಿತ–ಜನ ತತ್ತರ

24 ಗಂಟೆಗಳಲ್ಲಿ ಭೂಕುಸಿತದಲ್ಲಿ ಸಿಲುಕಿ ಇಬ್ಬರು ಸಾವು

ಪಿಟಿಐ
Published 29 ಜೂನ್ 2022, 13:19 IST
Last Updated 29 ಜೂನ್ 2022, 13:19 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಇಟಾನಗರ: ಅರುಣಾಚಲ ಪ್ರದೇಶದಲ್ಲಿ ಎಡಬಿಡದೆ ಮಳೆ ಸುರಿಯುತ್ತಿರುವ ಪರಿಣಾಮ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಹಲವೆಡೆ ಭೂಕುಸಿತ ಸಂಭವಿಸಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ 24 ಗಂಟೆಗಳಲ್ಲಿ ಭೂಕುಸಿತದಲ್ಲಿ ಸಿಲುಕಿ ಇಬ್ಬರು ಮೃತ‍ಪಟ್ಟಿದ್ದು, ನಾಪತ್ತೆಯಾದ ಇನ್ನೊಬ್ಬ ವ್ಯಕ್ತಿಗಾಗಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ಸಾರಿಗೆ ಮತ್ತು ಸಂಪರ್ಕ ವ್ಯವಸ್ಥೆ ಕಡಿತಗೊಂಡಿದೆ. ಪ್ರವಾಹದಿಂದ 52 ಗ್ರಾಮಗಳ 7,000 ಮಂದಿ ತೊಂದರೆಗೊಳಗಾಗಿದ್ದಾರೆ.

ಅನೇಕ ಕಡೆಗಳಲ್ಲಿ ಕುಡಿಯುವ ನೀರು ಮತ್ತು ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ತೀವ್ರ ಮಳೆ ಕಾರಣದಿಂದ ಕಳೆದ ಮೂರು ದಿನಗಳಿಂದ ಶಾಲೆ ಮತ್ತು ಕಾಲೇಜುಗಳನ್ನು ಮುಚ್ಚಲಾಗಿದೆ ಎಂದು ತಿಳಿಸಿದ್ದಾರೆ.

ADVERTISEMENT

ಅರುಣಾಚಲ ಪ್ರದೇಶದಲ್ಲಿ ಈ ವರ್ಷ ಪ್ರವಾಹ ಮತ್ತು ಭೂಕುಸಿತದಲ್ಲಿ ಸಿಲುಕಿ 17 ಮಂದಿ ಮೃತಪಟ್ಟಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.