ADVERTISEMENT

ನಾಗಪುರದಲ್ಲಿ ಭಾರಿ ಮಳೆ: ಹಲವು ಪ್ರದೇಶಗಳು ಜಲಾವೃತ, 180 ಜನರ ರಕ್ಷಣೆ

ಪಿಟಿಐ
Published 23 ಸೆಪ್ಟೆಂಬರ್ 2023, 6:29 IST
Last Updated 23 ಸೆಪ್ಟೆಂಬರ್ 2023, 6:29 IST
<div class="paragraphs"><p>ನಾಗಪುರದಲ್ಲಿ ರಕ್ಷಣಾ ಕಾರ್ಯಾಚರಣೆ </p></div>

ನಾಗಪುರದಲ್ಲಿ ರಕ್ಷಣಾ ಕಾರ್ಯಾಚರಣೆ

   

ಪಿಟಿಐ ಚಿತ್ರ

ನಾಗಪುರ: ಧಾರಾಕಾರ ಮಳೆಯಿಂದಾಗಿ ನಗರದ ಹಲವು ಪ್ರದೇಶಗಳು ಶನಿವಾರ ಜಲಾವೃತವಾಗಿವೆ ಎಂದು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್‌ ಹೇಳಿದ್ದಾರೆ.

ADVERTISEMENT

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್‌) ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್‌) ರಕ್ಷಣಾ ಕಾರ್ಯಚಾರಣೆಯಲ್ಲಿ ತೊಡಗಿವೆ. ಉಕ್ಕಿ ಹರಿಯುತ್ತಿರುವ ಅಂಬಝಾರಿ ನದಿ ಪ್ರದೇಶಕ್ಕೆ ಸೇನೆಯ ಎರಡು ತಂಡ ಧಾವಿಸಿವೆ.

ವಾಕ್‌ ಮತ್ತು ಶ್ರವಣ ದೋಷವುಳ್ಳ 40 ವಿದ್ಯಾರ್ಥಿಗಳು ಸೇರಿದಂತೆ 180 ಜರನ್ನು ರಕ್ಷಿಸಲಾಗಿದೆ ಎಂದು ಫಡಣವೀಸ್‌ ತಿಳಿಸಿದ್ದಾರೆ.

ನಗರದಲ್ಲಿ ಶುಕ್ರವಾರ ರಾತ್ರಿ ಭಾರಿ ಮಳೆ ಸುರಿದಿದೆ. ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ ನಾಗಪುರ ವಿಮಾನ ನಿಲ್ದಾಣದಲ್ಲಿ ಇಂದು (ಶನಿವಾರ) ಬೆಳಗ್ಗೆ 5.30ರ ವರೆಗೆ 10.6 ಸೆಂ.ಮೀ. ಮಳೆ ಸುರಿದಿದೆ. ಹಲವು ರಸ್ತೆಗಳು, ವಸತಿ ಪ್ರದೇಶಗಳು ಮುಳುಗಡೆಯಾಗಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮುನ್ನೆಚ್ಚರಿಕೆಯ ದೃಷ್ಟಿಯಿಂದ ಶಾಲಾ–ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ನಾಗಪುರ ಶಾಸಕರೂ ಆಗಿರುವ ಫಡಣವೀಸ್‌ ಅವರು, ಮಳೆ ಪರಿಸ್ಥಿತಿಯ ಬಗ್ಗೆ ನಿರಂತರವಾಗಿ ಅವಲೋಕನ ನಡೆಸುತ್ತಿರುವುದಾಗಿ ತಮ್ಮ ಎಕ್ಸ್ (ಟ್ವಿಟರ್‌) ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.