ADVERTISEMENT

ತಮಿಳುನಾಡಿನಲ್ಲಿ ಭಾರಿ ಮಳೆ; ಚೆಂಬರಂಬಕ್ಕಂ ಜಲಾಶಯದಿಂದ ನೀರು ಬಿಡುಗಡೆ

ಪಿಟಿಐ
Published 5 ಜನವರಿ 2021, 10:24 IST
Last Updated 5 ಜನವರಿ 2021, 10:24 IST
ಚೆನ್ನೈನಲ್ಲಿ ರಸ್ತೆ ಜಲಾವೃತಗೊಂಡಿರುವ ದೃಶ್ಯ (ಎಎನ್‌ಐ ಟ್ವಿಟರ್ ಚಿತ್ರ)
ಚೆನ್ನೈನಲ್ಲಿ ರಸ್ತೆ ಜಲಾವೃತಗೊಂಡಿರುವ ದೃಶ್ಯ (ಎಎನ್‌ಐ ಟ್ವಿಟರ್ ಚಿತ್ರ)   

ಚೆನ್ನೈ: ನಗರ ಸೇರಿದಂತೆ ತಮಿಳುನಾಡಿನ ಹಲವಡೆ ಮಂಗಳವಾರ ಬೆಳಿಗ್ಗೆಯಿಂದ ಭಾರಿ ಮಳೆಯಾಗುತ್ತಿದೆ.

ಭಾರಿ ಮಳೆ ಹಿನ್ನೆಲೆಯಲ್ಲಿ ಚೆಂಬರಂಬಕ್ಕಂ ಜಲಾಶಯದಿಂದ ಹೆಚ್ಚುವರಿ ನೀರನ್ನು ಬಿಡುಗಡೆ ಮಾಡಲಾಗಿದೆ. ಅಡ್ಯಾರ್ ನದಿಯ ಸುತ್ತಮುತ್ತಲ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಹಲವು ದಿನಗಳ ಬಳಿಕ ಚೆನ್ನೈನಲ್ಲಿ ಮಳೆಯಾಗಿದೆ. ನಗರದ ಪ್ರಮುಖ ರಸ್ತೆಗಳು ನೀರಿನಿಂದ ಜಲಾವೃತಗೊಂಡಿದ್ದು, ವಾಹನ ಸವಾರರು ಪರದಾಡಿದರು. ಮುಂದಿನ ಹಲವು ಗಂಟೆಗಳಲ್ಲಿ ವಿಲ್ಲುಪುರಂ, ಚೆಂಗಲ್ಪಟ್ಟು, ಕಾಂಚೀಪುರಂ, ಕಡಲೂರು, ನಾಗಪಟ್ಟಣಂ ಮತ್ತು ತಿರುವಣ್ಣಾಮಲೈ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ADVERTISEMENT

ಚೆಂಬರಂಬಕ್ಕಂ ಜಲಾಶಯದಿಂದ 500 ಕ್ಯೂಸೆಕ್‌ ಹೆಚ್ಚುವರಿ ನೀರನ್ನು ಅಡ್ಯಾರ್‌ ನದಿಗೆ ಬಿಡುಗಡೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.