ಮುಂಬೈ: ಮುಂಬೈನಲ್ಲಿ ಶುಕ್ರವಾರ ಬೆಳಗ್ಗೆ10.30ರ ವರೆಗೆ 10 ಸೆಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಮುಂಬೈ ಮತ್ತು ಸಮೀಪದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಜನರು ಮನೆಯೊಳಗೆ ಇರುವಂತೆ ಮುಂಬೈ ಪೊಲೀಸರು ಮನವಿ ಮಾಡಿದ್ದು, ಹೊರಗೆ ಹೋಗುವುದಾದರೆ ಮುಂಜಾಗ್ರತಾ ಕ್ರಮಗಳನ್ನು ವಹಿಸಿ ಎಂದಿದ್ದಾರೆ.
ಸಿಯಾನ್, ಕಿಂಗ್ ಸರ್ಕಲ್, ಹಿಂದ್ಮಠ, ದಾದರ್ ಮತ್ತು ಇತರ ತಗ್ಗು ಪ್ರದೇಶಗಳಲ್ಲಿ ರಸ್ತೆ ಜಲಾವೃತವಾಗಿದ್ದು ವಾಹನ ಸಂಚಾರಕ್ಕೆ ಅಡಚಣೆಯುಂಟಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.