ADVERTISEMENT

ಕೇದಾರನಾಥ ಬಳಿ ಹೆಲಿಕಾಪ್ಟರ್ ಅಪಘಾತ: ಪೈಲಟ್ ಸೇರಿ 6 ಯಾತ್ರಿಗಳು ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 18 ಅಕ್ಟೋಬರ್ 2022, 7:38 IST
Last Updated 18 ಅಕ್ಟೋಬರ್ 2022, 7:38 IST
ಹೆಲಿಕಾಪ್ಟರ್ ಅಪಘಾತವಾದ ಸ್ಥಳ– ಪಿಟಿಐ ಚಿತ್ರ
ಹೆಲಿಕಾಪ್ಟರ್ ಅಪಘಾತವಾದ ಸ್ಥಳ– ಪಿಟಿಐ ಚಿತ್ರ   

ಕೇದಾರನಾಥ (ಉತ್ತರಾಖಂಡ): ಕೇದಾರನಾಥ ದೇವಾಲಯದಿಂದ ಯಾತ್ರಿಗಳನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ಅಪಘಾತವಾಗಿ ಪೈಲಟ್ ಸೇರಿದಂತೆ 6 ಜನ ಮೃತಪಟ್ಟಿರುವ ಘಟನೆ ಮಂಗಳವಾರ ಬೆಳಿಗ್ಗೆ ಸಂಭವಿಸಿದೆ.

ಈ ಕುರಿತು ಎಎನ್‌ಐ ಸುದ್ದಿಸಂಸ್ಥೆ ಟ್ವೀಟ್ ಮಾಡಿದ್ದು, ಆರು ಮೃತದೇಹಗಳನ್ನು ಪತ್ತೆ ಹಚ್ಚಲಾಗಿದ್ದು, ಇನ್ನೊಬ್ಬರಿಗಾಗಿ ಶೋಧ ನಡೆಸಲಾಗುತ್ತಿದೆ.ಹೆಲಿಕಾಪ್ಟರ್‌ನಲ್ಲಿ ಒಟ್ಟು 7 ಜನ ಇದ್ದರು.

ಈ ದುರ್ಘಟನೆ ಕೇದಾರನಾಥದಿಂದ ಅಣತಿ ದೂರದಲ್ಲಿರುವ ಫಾಟಾದಲ್ಲಿನಡೆದಿದೆ. ಮೃತರ ಗುರುತು ಪತ್ತೆಗೆ ಶ್ರಮಿಸಲಾಗುತ್ತಿದ್ದು, ಪರಿಹಾರ ಕಾರ್ಯಾಚರಣೆ ತಂಡ ಸ್ಥಳಕ್ಕೆ ತೆರಳಿದೆ ಎಂದು ಉತ್ತರಾಖಂಡ ಸಿಎಂ ಅವರ ಪ್ರಧಾನ ಕಾರ್ಯದರ್ಶಿ ಅಭಿನವ್ ಕುಮಾರ್ ತಿಳಿಸಿದ್ದಾರೆ.

ADVERTISEMENT

ಹೆಲಿಕಾಪ್ಟರ್ಕೇದಾರನಾಥದಿಂದ ಹಾರಾಟ ಆರಂಭಿಸಿದ ಕೆಲವೇ ಕ್ಷಣಗಳಲ್ಲಿ ಹವಾಮಾನ ವೈಪರಿತ್ಯದಿಂದ ಅಪಘಾತಕ್ಕೆ ಈಡಾಗಿದೆ ಎಂದು ವರದಿ ತಿಳಿಸಿದೆ.ಹೆಲಿಕಾಪ್ಟರ್ಡೆಹರಾಡೂನ್‌ಗೆ ತೆರಳುತ್ತಿತ್ತು ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.