ADVERTISEMENT

ದೆಹಲಿ: ಹಿಜಾಬ್ ಬೆಂಬಲಿಸಿ ಪ್ರತಿಭಟನೆ, ವಿದ್ಯಾರ್ಥಿಗಳನ್ನು ವಶಕ್ಕೆ‌ ಪಡೆದ ಪೊಲೀಸ್

​ಪ್ರಜಾವಾಣಿ ವಾರ್ತೆ
Published 11 ಫೆಬ್ರುವರಿ 2022, 12:10 IST
Last Updated 11 ಫೆಬ್ರುವರಿ 2022, 12:10 IST
ದೆಹಲಿಯ ಕರ್ನಾಟಕ ಭವನದ ಬಳಿ ಶುಕ್ರವಾರ ಪ್ರತಿಭಟನೆ‌ ನಡೆಸಲು ಬಂದ ಎಸ್ಎಫ್ಐ ಸದಸ್ಯರು ಘೋಷಣೆ ಕೂಗಿದರು.
ದೆಹಲಿಯ ಕರ್ನಾಟಕ ಭವನದ ಬಳಿ ಶುಕ್ರವಾರ ಪ್ರತಿಭಟನೆ‌ ನಡೆಸಲು ಬಂದ ಎಸ್ಎಫ್ಐ ಸದಸ್ಯರು ಘೋಷಣೆ ಕೂಗಿದರು.   

ನವದೆಹಲಿ: ರಾಜ್ಯದಲ್ಲಿ ಹಿಜಾಬ್- ಕೇಸರಿ ಶಾಲು ಕುರಿತ ವಿವಾದದಿಂದ ಮುಸ್ಲಿಂ ವಿದ್ಯಾರ್ಥಿನಿಯರ ಶಿಕ್ಷಣದ ಹಕ್ಕನ್ನು ಮೊಟಕಗೊಳಿಸಲಾಗುತ್ತಿದೆ ಎಂದು ಆರೋಪಿಸಿ ಭಾರತೀಯ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ನೇತೃತ್ವದಲ್ಲಿ ಶುಕ್ರವಾರ ಇಲ್ಲಿನ ಕರ್ನಾಟಕ ಭವನದೆದುರು ಪ್ರತಿಭಟನೆ ನಡೆಸಲು ಬಂದವರನ್ನು ಪೊಲೀಸರು ವಶಕ್ಕೆ‌ ಪಡೆದರು.

ಕರ್ನಾಟಕದ‌ ವಿವಿಧ ಕಾಲೇಜುಗಳಲ್ಲಿ ಹಿಜಾಬ್ ಗೆ ವಿರೋಧ ವ್ಯಕ್ತಪಡಿಸುವ ಮೂಲಕ ಇಸ್ಲಾಂ ಕುರಿತು ಭಯ ಹುಟ್ಟಿಸಲಾಗುತ್ತಿದೆ ಎಂದು ಘೋಷಣೆ ‌ಕೂಗಿದ ಕೆಲವು ವಿದ್ಯಾರ್ಥಿಗಳನ್ನು ಪೊಲೀಸರು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ‌ ಪಡೆದು ವಾಹನದಲ್ಲಿ ಕರೆದೊಯ್ದರು.

ಪ್ರತಿಭಟನೆ ಹಿನ್ನೆಲೆಯಲ್ಲಿ ಸರ್ದಾರ್ ಪಟೇಲ್ ಮಾರ್ಗದಲ್ಲಿನ ಕರ್ನಾಟಕ‌ ಭವನ-2ರ‌ ಬಳಿ ಸತತ ಎರಡನೇ ದಿನವೂ ಪೊಲೀಸ್ ಬಿಗಿ ಭದ್ರತೆ ಒದಗಿಸಲಾಗಿದೆ.

ADVERTISEMENT

ಗುರುವಾರವೂ ಕೆಲವು ವಿದ್ಯಾರ್ಥಿ ‌ಸಂಘಟನೆಗಳ 100ಕ್ಕೂ ಅಧಿಕ ಸದಸ್ಯರು ಕರ್ನಾಟಕ ಭವನದೆದುರು ಪ್ರತಿಭಟನೆ ನಡೆಸಲು ಬಂದಾಗ‌ ಪೊಲೀಸರು ವಶಕ್ಕೆ ಪಡೆದಿದ್ದರು.

ದೆಹಲಿಯ ಕರ್ನಾಟಕ ಭವನದ ಎದುರು ಶುಕ್ರವಾರ ಪ್ರತಿಭಟನೆ‌ ನಡೆಯಲಿದ್ದ ಹಿನ್ನೆಲೆಯಲ್ಲಿ
ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.