ಮಂಡಿ (ಹಿಮಾಚಲ ಪ್ರದೇಶ): ಹಿಮಾಚಲ ಪ್ರದೇಶದ ಮತದಾರರು ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿಗೆ ಅಧಿಕಾರ ನೀಡಲು ಮನಸ್ಸು ಮಾಡಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ತಿಳಿಸಿದರು.
ಕೆಲ ತಿಂಗಳ ಹಿಂದೆ ನಡೆದ ಉತ್ತರಪ್ರದೇಶ ಮತ್ತು ಉತ್ತರಾಖಂಡದ ಚುನಾವಣೆಯಲ್ಲಿ ಅಲ್ಲಿನ ಮತದಾರರು ಬಿಜೆಪಿ ಸರ್ಕಾರ ಮತ್ತೆ ರಚನೆಯಾಗುವಂತೆ ಮಾಡಿದ್ದಾರೆ. ಇದೇ ರೀತಿಯ ಫಲಿತಾಂಶ ಹಿಮಾಚಲ ಪ್ರದೇಶದಲ್ಲೂ ಬರಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಮಂಡಿಯಲ್ಲಿ ನಿಗದಿಯಾಗಿದ್ದ ಬಿಜೆಪಿ ಯುವ ಪಡೆಯ ಸಮಾವೇಶವನ್ನು ಉದ್ದೇಶಿಸಿ ಮೋದಿ ಅವರು ವಿಡಿಯೊ ಕಾನ್ಫರೆನ್ಸ್ ಮೂಲಕ ಮಾತನಾಡಿದರು. ಈ ಸ್ಥಳಕ್ಕೆ ಹೆಲಿಕಾಪ್ಟರ್ನಲ್ಲಿ ಹೋಗಬೇಕಿದ್ದ ಮೋದಿ ಅವರು, ಪ್ರತಿಕೂಲ ಹವಾಮಾನದ ಪರಿಣಾಮ ಹೋಗಲಾಗಲಿಲ್ಲ.
ಈ ಹಿಂದೆ ಉತ್ತರ ಪ್ರದೇಶ ಮತ್ತು ಉತ್ತರಾಖಂಡ ರಾಜ್ಯಗಳಲ್ಲಿನ ಮತದಾರರು ಒಂದೊಂದು ಬಾರಿ ಒಂದೊಂದು ಪಕ್ಷಕ್ಕೆ ಅಧಿಕಾರ ನೀಡುವುದನ್ನು ವಾಡಿಕೆ ಮಾಡಿಕೊಂಡಿದ್ದರು. ಆದರೆ ಈ ಬಾರಿ ಅವರು ಆ ಮನಸ್ಥಿತಿಯನ್ನು ಬದಲಿಸಿಕೊಂಡರು ಎಂದು ಮೋದಿ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.