ಶಿಮ್ಲಾ: ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ನೇತೃತ್ವದ ಹಿಮಾಚಲ ಪ್ರದೇಶ ಸರ್ಕಾರವು ಶುಕ್ರವಾರ ನಡೆದ ಮೊದಲ ಸಂಪುಟ ಸಭೆಯಲ್ಲಿ ಸರ್ಕಾರಿ ನೌಕರರ ಹಳೆ ಪಿಂಚಣಿ ಯೋಜನೆ ಮರುಸ್ಥಾಪನೆಗೆ ಅನುಮೋದನೆ ನೀಡಿದೆ.
ಹಳೆ ಪಿಂಚಣಿ ಯೋಜನೆ ಮರುಸ್ಥಾಪನೆ ಮಾಡುವುದಾಗಿ ಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ್ ಭರವಸೆ ನೀಡಿತ್ತು.
ಇಂದಿನಿಂದ ಹಳೆ ಪಿಂಚಣಿ ಯೋಜನೆಯ ಲಾಭವನ್ನು ಪಡೆಯಬಹುದು. ಈ ಕುರಿತ ಅಧಿಸೂಚನೆಯನ್ನು ಶೀಘ್ರ ಹೊರಡಿಸಲಾಗುವುದು ಎಂದು ಸುಖು ಅವರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.