ಆಗ್ರಾ: ಶಿವರಾತ್ರಿ ಹಿನ್ನೆಲೆಯಲ್ಲಿ ತಾಜ್ಮಹಲ್ನ ಆವರಣದೊಳಗೆ ಶಿವಪೂಜೆಗೆ ಮುಂದಾಗಿದ್ದ ಹಿಂದೂ ಮಹಾಸಭಾದ ಮೂವರು ಸದಸ್ಯರನ್ನು ಗುರುವಾರ ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಐತಿಹಾಸಿಕ ತಾಜ್ಮಹಲ್ನಲ್ಲಿ ನಿಯೋಜಿಸಲಾಗಿರುವ ಕೇಂದ್ರ ಭದ್ರತಾ ಪಡೆ ಸಿಬ್ಬಂದಿಯು ಮೂವರನ್ನು ವಶಕ್ಕೆ ಪಡೆದು ಆ ನಂತರ ಪೊಲೀಸರಿಗೆ ಒಪ್ಪಿಸಿದ್ದಾರೆ.
ಮಹಿಳೆಯೂ ಸೇರಿದಂತೆ ಹಿಂದೂ ಮಹಾಸಭಾದ ಮೂವರು ಸದಸ್ಯರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ತಾಜ್ಗಂಜ್ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಉಮೇಶ್ ಚಂದ್ರ ತ್ರಿಪಾಠಿ ತಿಳಿಸಿದ್ದಾರೆ.
ಹಿಂದೂ ಮಹಾಸಭಾದ ಪ್ರಾಂತೀಯ ಅಧ್ಯಕ್ಷೆ ಮೀನಾ ದಿವಾಕರ್ ಎಂಬುವವರು ತಾಜ್ಮಹಲ್ ಆವರಣದಲ್ಲಿರುವ ಮುಖ್ಯ ತೊಟ್ಟಿಯ ಬಳಿ ಇಬ್ಬರು ವ್ಯಕ್ತಿಗಳೊಂದಿಗೆ ಪೂಜೆ ಸಲ್ಲಿಸಲು ಮುಂದಾಗಿದ್ದರು ಎಂದು ಪೊಲೀಸರು ಹೇಳಿದ್ದಾರೆ.
ಮೊಘಲರ ಆಳ್ವಿಕೆಯಲ್ಲಿ ನಿರ್ಮಾಣವಾಗಿರುವ ಸ್ಮಾರಕವು ಭಾರತದ ಪುರಾತತ್ವ ಇಲಾಖೆಯು ಅಡಿಯಲ್ಲಿ ಸಂರಕ್ಷಿಸಲ್ಪಟ್ಟಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.