ಜೈಪುರ: ರಾಜಸ್ಥಾನದ ಟೊಂಕ್ ರಸ್ತೆಯಲ್ಲಿರುವ ತೇಜಾಜಿ ದೇವಸ್ಥಾನದಲ್ಲಿರುವ ಮೂರ್ತಿ ಭಗ್ನಗೊಳಿಸಲಾಗಿದೆ ಎಂದು ಆರೋಪಿಸಿ ಸ್ಥಳೀಯ ನಾಗರಿಕರು, ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ಸದಸ್ಯರ ಜೊತೆಗೂಡಿ ಶನಿವಾರ ಪ್ರತಿಭಟಿಸಿದರು.
ಟೊಂಕ್ ರಸ್ತೆ ತಡೆದು ಪ್ರತಿಭಟನೆ ನಡೆಸಿದ ಹಿಂದೂಪರ ಸಂಘಟನೆಗಳು, ಈ ಕೃತ್ಯವೆಸಗಿದವರನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದರು.
ಈ ಬಗ್ಗೆ ಆಕ್ರೋಶ ಹೆಚ್ಚುತ್ತಿದ್ದಂತೆ ಪ್ರತಿಭಟನಕಾರರ ಸಂಖ್ಯೆಯೂ ಏರಿಕೆಯಾಯಿತು. ಈ ಸಂದರ್ಭದಲ್ಲಿ ಗಲಭೆಕೋರರನ್ನು ಚದುರಿಸಲು ಪೊಲೀಸರು ಲಘು ಬಲಪ್ರಯೋಗ ಮಾಡಿದರು. ಕೆಲವು ಪ್ರತಿಭಟನಕಾರರನ್ನು ವಶಕ್ಕೆ ಪಡೆದ ಪೊಲೀಸರು, ವಾಹನಗಳ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.