ADVERTISEMENT

ದೆಹಲಿ ಪ್ರತಿಭಟನೆ: ಪೊಲೀಸ್, ರಕ್ಷಣಾಧಿಕಾರಿಗಳೊಂದಿಗೆ ಅಮಿತ್ ಶಾ ಮಾತುಕತೆ

​ಪ್ರಜಾವಾಣಿ ವಾರ್ತೆ
Published 12 ಡಿಸೆಂಬರ್ 2020, 4:18 IST
Last Updated 12 ಡಿಸೆಂಬರ್ 2020, 4:18 IST
ಕೇಂದ್ರ ಗೃಹಸಚಿವ ಅಮಿತ್ ಶಾ
ಕೇಂದ್ರ ಗೃಹಸಚಿವ ಅಮಿತ್ ಶಾ    

ನವದೆಹಲಿ:ಕೃಷಿ ಸುಧಾರಣಾ ಕಾಯ್ದೆಗಳನ್ನು ವಿರೋಧಿಸಿ ದೆಹಲಿ ಗಡಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಯ ಹಿನ್ನಲೆಯಲ್ಲಿ ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಪೊಲೀಸರು, ರಕ್ಷಣಾ ಸಿಬ್ಬಂದಿ ಹಾಗೂ ಸರ್ಕಾರದ ಉನ್ನತ ಅಧಿಕಾರಿಗಳೊಂದಿಗೆ ಇಂದು ಸಭೆ ನಡೆಸಿದ್ದಾರೆ.

ಪ್ರತಿಭಟನೆ ವೇಳೆ ಗಲಭೆಗಳಾಗದಂತೆ ಮುನ್ನೆಚ್ಚರಿಕೆ ವಹಿಸುವ ಬಗ್ಗೆ ಚರ್ಚಿಸಲಾಗಿದೆ.

ಗಲಭೆಗೆ ಪ್ರಚೋದನೆ ನೀಡುವ ಕನಿಷ್ಠ ಹತ್ತು ಗುಂಪುಗಳು ಪ್ರತಿಭಟನಾ ನಿರತ ರೈತರನ್ನು ಕೂಡಿಕೊಂಡಿರಬಹುದು ಎಂದು ಗುಪ್ತಚರ ಇಲಾಖೆ ಮಾಹಿತಿನೀಡಿದೆ. ಅದರಂತೆ ಸೂಕ್ತ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ADVERTISEMENT

ಕೇಂದ್ರ ಸರ್ಕಾರ ಅಂಗೀಕರಿಸಿರುವ ಮೂರು ಕೃಷಿ ಸುಧಾರಣಾ ಕಾನೂನುಗಳನ್ನು ಸಂಪೂರ್ಣವಾಗಿ ರದ್ದುಗೊಳಿಸಬೇಕು ಎಂದು ಕಳೆದ 17 ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ರೈತರು, ಇಂದು ದೆಹಲಿ–ಜೈಪುರ ಹೆದ್ದಾರಿ ಬಂದ್ ಮಾಡಲು ನಿರ್ಧರಿಸಿದ್ದಾರೆ. ಹಾಗೆಯೇ ಸೋಮವಾರ (ಡಿ.14) ರಾಷ್ಟ್ರವ್ಯಾಪಿ ಪ್ರತಿಭಟನೆ ವಿಸ್ತರಿಸಲು ಯೋಜಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.