ADVERTISEMENT

ಎಎಪಿ ಸರ್ಕಾರ ದೆಹಲಿ ಜನತೆಗೆ ಮೋಸ ಮಾಡುತ್ತಿದೆ: ಅಮಿತ್ ಶಾ ಆರೋಪ

ಪಿಟಿಐ
Published 6 ಜನವರಿ 2020, 11:29 IST
Last Updated 6 ಜನವರಿ 2020, 11:29 IST
   

ನವದೆಹಲಿ:ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರ ಜಾಹೀರಾತು ನೀಡುವ ಮೂಲಕ ದೆಹಲಿ ಜನತೆಗೆ ಮೋಸ ಮಾಡುತ್ತಿರುವುದು ಬಿಟ್ಟರೆ ಬೇರೇನೂ ಮಾಡುತ್ತಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೋಮವಾರ ಆರೋಪಿಸಿದ್ದಾರೆ.

ದೆಹಲಿ ಚುನಾವಣಾ ದಿನಾಂಕ ಪ್ರಕಟವಾಗುವ ಕೆಲವೇ ಕ್ಷಣಗಳ ಮುನ್ನ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಅರವಿಂದ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

‘ಬಡವರು ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸುವವರು ಎಎಪಿ ಸರ್ಕಾರದಿಂದ ಅತಿ ಹೆಚ್ಚು ತೊಂದರೆಗೆ ಒಳಗಾಗಿದ್ದಾರೆ. ದೆಹಲಿ ಸರ್ಕಾರವು ಕೇಂದ್ರದ ಆಯುಷ್ಮಾನ್ ಭಾರತ್ ಯೋಜನೆಯನ್ನು ಜಾರಿ ಮಾಡುತ್ತಿಲ್ಲ. ಯೋಜನೆ ಅನುಷ್ಠಾನವಾದರೆ ದೆಹಲಿ ಜನರು ಚುನಾವಣೆಯಲ್ಲಿ ಬಿಜೆಪಿ ಬೆಂಬಲಿಸಬಹುದು ಎಂಬ ಭಯ ಮುಖ್ಯಮಂತ್ರಿ ಕೇಜ್ರಿವಾಲ್ ಅವರನ್ನು ಕಾಡುತ್ತಿದೆ’ ಎಂದು ಶಾ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.