ADVERTISEMENT

ತಬ್ಲಿಗಿ ಜಮಾತ್: ಸದಸ್ಯರು, ಸಂಪರ್ಕದಲ್ಲಿದ್ದ 22 ಸಾವಿರ ಮಂದಿಗೆ ಕ್ವಾರಂಟೈನ್

​ಪ್ರಜಾವಾಣಿ ವಾರ್ತೆ
Published 4 ಏಪ್ರಿಲ್ 2020, 12:46 IST
Last Updated 4 ಏಪ್ರಿಲ್ 2020, 12:46 IST
ತಬ್ಲಿಗಿ ಜಮಾತ್ ಸದಸ್ಯರಿಗೆ ಚಿಕಿತ್ಸೆ
ತಬ್ಲಿಗಿ ಜಮಾತ್ ಸದಸ್ಯರಿಗೆ ಚಿಕಿತ್ಸೆ   

ನವದೆಹಲಿ: ತಬ್ಲಿಗಿ ಜಮಾತ್ ಸದಸ್ಯರು ಹಾಗೂ ಅವರ ಸಂಪರ್ಕದಲ್ಲಿದ್ದ 22 ಸಾವಿರ ಮಂದಿಯನ್ನು ದೇಶದಾದ್ಯಂತ ಕ್ವಾರಂಟೈನ್‌ನಲ್ಲಿ ಇಡಲಾಗಿದೆ ಎಂದು ಕೇಂದ್ರ ಗೃಹ ಇಲಾಖೆ ತಿಳಿಸಿದೆ.

ಕೇಂದ್ರ ಗೃಹ ಇಲಾಖೆಯ ಜಂಟಿ ಕಾರ್ಯದರ್ಶಿ ಪುಣ್ಯ ಸಲೀಲ ಶ್ರೀವಾಸ್ತವ ಈ ಸಂಬಂಧ ಶನಿವಾರ ಸುದ್ದಿಗಾರರಿಗೆ ವಿವರ ನೀಡಿ, ಇದೊಂದು ಒಗ್ಗಟ್ಟಿನಿಂದ ಶ್ರಮಿಸಿದ ಫಲ. ಈ ಕಾರ್ಯಾಚರಣೆಯನ್ನು ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳ ಸಹಕಾರದಿಂದ ನಡೆಸಿದೆ. ಎಲ್ಲಾ ಜಮಾತ್‌‌ನ ಸದಸ್ಯರು ಹಾಗೂ ಅವರ ಸಂಪರ್ಕದಲ್ಲಿದ್ದ ಎಲ್ಲರನ್ನೂಪತ್ತೆ ಹಚ್ಚಲಾಗಿದೆ. ಅವರನ್ನೆಲ್ಲಾ ಕ್ವಾರಂಟೈನ್‌ನಲ್ಲಿ ಇಡಲಾಗಿದೆ ಎಂದು ತಿಳಿಸಿದ್ದಾರೆ.

ಗೃಹ ಇಲಾಖೆ ದಿನದ 24 ಗಂಟೆಗಳ ಕಾಲ ನಿಯಂತ್ರಣ ಕೊಠಡಿಯನ್ನು ತೆರೆದು ಲಾಕ್ ಡೌನ್ ಹಾಗೂ ಅದಕ್ಕೆ ಸಂಬಂಧಿಸಿದ ಎಲ್ಲಾ ವಿಷಯಗಳ ಮೇಲ್ವಿಚಾರಣೆ ನೋಡಿಕೊಳ್ಳುತ್ತಿದೆ ಎಂದು ಅವರು ತಿಳಿಸಿದ್ದಾರೆ.ಸಿಆರ್‌ಪಿಎಫ್ ಸಿಬ್ಬಂದಿ ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ 200ಕ್ಕೂ ಹೆಚ್ಚು ಮಂದಿ ಸ್ಥಳೀಯ ಮಟ್ಟದಲ್ಲಿ ಶ್ರಮಿಸುತ್ತಿದ್ದಾರೆ ಎಂದು ಪುಣ್ಯ ತಿಳಿಸಿದ್ದಾರೆ.

ADVERTISEMENT

ರಾಜಸ್ಥಾನದಲ್ಲಿ ಇಬ್ಬರಿಗೆ ಸೋಂಕು

ಈ ಮಧ್ಯೆ ದೆಹಲಿಯಲ್ಲಿ ನಡೆದ ತಬ್ಲಿಗಿ ಜಮಾತ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ರಾಜಸ್ಥಾನದ ಇಬ್ಬರು ವ್ಯಕ್ತಿಗಳಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ರಾಜಸ್ಥಾನ ಆರೋಗ್ಯ ಮತ್ತು ಕುಟುಂಬ ಕಲ್ಯಾಣಇಲಾಖೆ ತಿಳಿಸಿದೆ.

21 ಮಂದಿಗೆ ಕೊರೊನಾ ಸೋಂಕು ಪರೀಕ್ಷೆ ನಡೆಸಲಾಗಿತ್ತು. ಅವರಲ್ಲಿ 10 ಮಂದಿ ತಬ್ಲಿಗಿ ಜಮಾತ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದವರು ಎಂಬುದು ಪತ್ತೆಯಾಗಿದೆ.ಇದರಿಂದಾಗಿ ಒಟ್ಟು ಸೋಂಕಿತರ ಸಂಖ್ಯೆ 200ಕ್ಕೆ ಏರಿದೆ ಎಂದು ಇಲಾಖೆ ಪ್ರಕಟಿಸಿದೆ ಎಂದುಎಎನ್ಐ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.