ADVERTISEMENT

ವಿಶ್ವವಿದ್ಯಾಲಯಗಳನ್ನು ರಾಜಕೀಯ ಅಡ್ಡೆ ಆಗಲು ಬಿಡುವುದಿಲ್ಲ: ರಮೇಶ್‌ ಪೋಖ್ರಿಯಾಲ್‌

ಪಿಟಿಐ
Published 6 ಜನವರಿ 2020, 9:29 IST
Last Updated 6 ಜನವರಿ 2020, 9:29 IST
ರಮೇಶ್ ಪೋಖ್ರಿಯಾಲ್‌ ನಿಶಾಂಕ್‌
ರಮೇಶ್ ಪೋಖ್ರಿಯಾಲ್‌ ನಿಶಾಂಕ್‌   

ಡೆಹ್ರಾಡೂನ್: ವಿಶ್ವವಿದ್ಯಾಲಯಗಳು ಕಲಿಕಾ ಕೇಂದ್ರಗಳು,ಅವುಗಳನ್ನು ರಾಜಕೀಯ ಅಡ್ಡೆ ಆಗಲು ಬಿಡುವುದಿಲ್ಲ ಎಂದು ಮಾನವ ಸಂಪನ್ಮೂಲ ಇಲಾಖೆಯ ಸಚಿವ ರಮೇಶ್ ಪೋಖ್ರಿಯಾಲ್‌ ನಿಶಾಂಕ್‌ ಹೇಳಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ವಿಶ್ವವಿದ್ಯಾಲಯಗಳಲ್ಲಿ ನಡೆಯುತ್ತಿರುವ ಪ್ರತಿಭಟನೆ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರುವಿಶ್ವವಿದ್ಯಾಲಯಗಳಲ್ಲಿ ದೇಶದ ಭವಿಷ್ಯ ರೂಪುಗೊಳ್ಳುತ್ತದೆ. ಅದನ್ನು ರಾಜಕೀಯ ಅಡ್ಡ ಮಾಡಲು ಬಿಡುವುದಿಲ್ಲ ಎಂದಿದ್ದಾರೆ.

ಅದೇ ವೇಳೆ ವಿಪಕ್ಷಗಳು ವಿಶ್ವವಿದ್ಯಾಲಯಗಳನ್ನು ರಾಜಕೀಯಕ್ಕಾಗಿ ಬಳಸುತ್ತಿವೆ ಎಂದು ಆರೋಪಿಸಿದ್ದಾರೆ.

ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಲ್ಲಿನ ಅಲ್ಪಸಂಖ್ಯಾತರು ಭಾರತಕ್ಕೆ ಅಭಯಾರ್ಥಿಗಳಾಗಿ ಬಂದರೆ ಅವರಿಗೆ ದೇಶದ ಪೌರತ್ವ ನೀಡುವುದರಲ್ಲಿ ತಪ್ಪಿಲ್ಲ ಎಂದು ಸಚಿವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.