ADVERTISEMENT

ಕರಾವಳಿ ರಕ್ಷಣಾಪಡೆಯ ನೌಕೆಯಲ್ಲಿ ಬೆಂಕಿ: ಓರ್ವ ವ್ಯಕ್ತಿ ಸಾವು, 28 ಮಂದಿ ಪಾರು

​ಪ್ರಜಾವಾಣಿ ವಾರ್ತೆ
Published 12 ಆಗಸ್ಟ್ 2019, 13:26 IST
Last Updated 12 ಆಗಸ್ಟ್ 2019, 13:26 IST
   

ವಿಶಾಖಪಟ್ಟಣ: ವಿಶಾಖಪಟ್ಟಣದ ಹೊರವಲಯ ಬಂದರಿನ ತೀರದಲ್ಲಿರುವ ಸಹಾಯಕ ನೌಕೆಯಲ್ಲಿ ಸೋಮವಾರ ಬೆಳಗ್ಗೆ ಬೆಂಕಿ ಅನಾಹುತ ಸಂಭವಿಸಿದೆ.ಈ ನೌಕೆಯಲ್ಲಿ 29 ಸಿಬ್ಬಂದಿಗಳು ಇದ್ದರು ಎಂದು ಕರಾವಳಿ ರಕ್ಷಣಾಪಡೆ ಹೇಳಿದೆ.

ಇದರಲ್ಲಿ ಓರ್ವ ಸಾವಿಗೀಡಾಗಿದ್ದು, 28 ಮಂದಿಪಾರಾಗಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

15 ಮಂದಿಗೆ ಗಾಯಗಳಾಗಿದ್ದು, 8ಮಂದಿಗೆ ಸಾಮಾನ್ಯ ಗಾಯಗಳಾಗಿವೆ. ಗಂಭೀರ ಗಾಯಗೊಂಡಿರುವ 8 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸ್ ಅಧಿಕಾರಿ ಹೇಳಿರುವುದಾಗಿ ಎಎನ್‌ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

ADVERTISEMENT

ಸೋಮವಾರ ಬೆಳಗ್ಗೆ 11.30ಕ್ಕೆ ಸಹಾಯಕ ನೌಕೆ ಕೋಸ್ಟಲ್ ಜಾಗ್ವಾರ್‌ನಲ್ಲಿ ಸ್ಫೋಟ ಸದ್ದು ಕೇಳಿದೆ. ಇದಾದ ಕೆಲವೇ ನಿಮಿಷಗಳಲ್ಲಿ ಕರಿ ಹೊಗೆ ದಟ್ಟವಾಗಿ ಆವರಿಸಿಕೊಂಡಿದೆ. ತಕ್ಷಣವೇ ಅದರಲ್ಲಿದ್ದ ಸಿಬ್ಬಂದಿಗಳು ನೀರಿಗೆ ಹಾರಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬೆಂಕಿ ಅವಘಡ ಸಂಭವಿಸಲು ಕಾರಣ ಏನು ಎಂಬುದು ಇಲ್ಲಿಯವರೆಗೆ ತಿಳಿದು ಬಂದಿಲ್ಲ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.