ADVERTISEMENT

ಯುವಕರು ಭಯೋತ್ಪಾದಕರಾಗದಂತೆ ತಡೆಯಿರಿ: ನರೇಂದ್ರ ಮೋದಿ

ಪಿಟಿಐ
Published 4 ಸೆಪ್ಟೆಂಬರ್ 2020, 8:20 IST
Last Updated 4 ಸೆಪ್ಟೆಂಬರ್ 2020, 8:20 IST
ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ   

ಹೈದರಾಬಾದ್‌: ಜಮ್ಮು ಮತ್ತು ಕಾಶ್ಮೀರದ ಯುವಕರು ಭಯೋತ್ಪಾದನೆಗೆ ಸೇರದಂತೆ ತಡೆಯಲು, ಅಲ್ಲಿನ ತಾಯಂದಿರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಮಹಿಳಾ ಪೊಲೀಸ್‌ ಸಿಬ್ಬಂದಿಗೆ ಸಲಹೆ ನೀಡಿದರು.

ಹೈದರಾಬಾದ್‌ನ ಸರ್ದಾರ್‌ ವಲ್ಲಭಭಾಯಿ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯ ಐಪಿಎಸ್‌ ಪ್ರೊಬೇಷನರಿ ಅಧಿಕಾರಿಗಳೊಂದಿಗೆ ಶುಕ್ರವಾರ ನಡೆದ ವಿಡಿಯೊ ಸಂವಾದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರು ಮಾತನಾಡಿದರು.

ಕೊರೊನಾ ಪಿಡುಗಿನ ವೇಳೆ ಪೊಲೀಸರ ಮಾನವೀಯತೆಯನ್ನು ಜನರು ನೋಡಿದ್ದಾರೆ ಎಂದರು.

ADVERTISEMENT

‘ಜಮ್ಮು–ಕಾಶ್ಮೀರದ ಜನರ ಮನಸ್ಸು ಬಹಳ ಸುಂದರವಾಗಿದೆ. ಅಲ್ಲಿನ ಜನರೊಂದಿಗೆ ನಾನು ನಿಕಟ ಸಂಪರ್ಕ ಹೊಂದಿದ್ದೇನೆ. ಅವರು ಎಲ್ಲರನ್ನೂ ಪ್ರೀತಿಯಿಂದ ನೋಡುತ್ತಾರೆ. ಹಾಗಾಗಿ, ಅಲ್ಲಿ ತಪ್ಪು ದಾರಿ ಹಿಡಿಯುವವರನ್ನು ನಾವು ತಡೆಯಬೇಕು. ಮಹಿಳಾ ಪೊಲೀಸ್‌ ಸಿಬ್ಬಂದಿಯಿಂದ ಈ ಕೆಲಸ ಸಾಧ್ಯ. ಯುವಕರು ಭಯೋತ್ಪಾದನೆಯತ್ತ ಸಾಗುವುದನ್ನುತಾಯಂದಿರ ನೆರವಿನಿಂದ ತಡೆಯಬಹುದು. ಈ ಮೂಲಕ ಆರಂಭಿಕ ಹಂತದಲ್ಲೇ ಭಯೋತ್ಪಾದನೆಯನ್ನು ತಡೆಯಬಹುದು’ ಎಂದು ಅವರು ಕಿವಿಮಾತು ಹೇಳಿದರು.

ಯೋಗ ಮತ್ತು ಪ್ರಾಣಾಯಾಮಗಳು ಒತ್ತಡವನ್ನು ನಿವಾರಿಸಲು ಉತ್ತಮ ಮಾರ್ಗಗಳಾಗಿವೆ ಎಂದು ಅವರು ಇದೇ ವೇಳೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.