ADVERTISEMENT

ಅಯೋಧ್ಯೆ ದೀಪೋತ್ಸವ: ಭರದಿಂದ ಸಾಗಿದ ದೀಪ ತಯಾರಿಕೆ ಕಾರ್ಯ

ಪಿಟಿಐ
Published 24 ಆಗಸ್ಟ್ 2022, 12:38 IST
Last Updated 24 ಆಗಸ್ಟ್ 2022, 12:38 IST
ಮಣ್ಣಿನ ದೀಪಗಳ ತಯಾರಿಕೆಯಲ್ಲಿ ನಿರತವಾಗಿರುವ ಕಲಾವಿದರು –ಪಿಟಿಐ ಚಿತ್ರ
ಮಣ್ಣಿನ ದೀಪಗಳ ತಯಾರಿಕೆಯಲ್ಲಿ ನಿರತವಾಗಿರುವ ಕಲಾವಿದರು –ಪಿಟಿಐ ಚಿತ್ರ   

ಅಯೋಧ್ಯೆ (ಪಿಟಿಐ): ದೀಪಾವಳಿ ಪ್ರಯುಕ್ತ ಉತ್ತರ ಪ್ರದೇಶದ ಅಯೋಧ್ಯೆಯ ಸರಯು ನದಿ ತೀರದಲ್ಲಿ ಎರಡು ತಿಂಗಳ ಕಾಲ ನಡೆಯುವ ದೀಪೋತ್ಸವಕ್ಕೆ 14 ಲಕ್ಷ ಮಣ್ಣಿನ ದೀಪಗಳಿಗೆ ಬೇಡಿಕೆ ಬಂದಿದೆ. ಈ ಹಿನ್ನೆಲೆಯಲ್ಲಿ ದೀಪಗಳ ತಯಾರಿಕೆ ಕಾರ್ಯ ಭರದಿಂದ ಸಾಗಿದೆ.

ಉತ್ತರ ಪ್ರದೇಶ ಸರ್ಕಾರದ ಪ್ರಾಯೋಜಕತ್ವದಲ್ಲಿ ಈ ದೀಪೋತ್ಸವ ನಡೆಯಲಿದೆ. ಮುಸ್ಸಂಜೆ ವೇಳೆಯಲ್ಲಿ ಜನರು ಸ್ವಯಂಪ್ರೇರಣೆಯಿಂದ ಬಂದು ನದಿಯ ತೀರದುದ್ದಕ್ಕೂ ಮಣ್ಣಿನ ದೀಪಗಳನ್ನು ಬೆಳಗುತ್ತಾರೆ.

ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಈ ಸಂಪ್ರದಾಯ ಆರಂಭವಾಗಿದೆ. 2017ರಲ್ಲಿ 51,000 ದೀಪಗಳನ್ನು ಬೆಳಗಲಾಗಿತ್ತು. 2019ರಲ್ಲಿ 4.10 ಲಕ್ಷ, 2020ರಲ್ಲಿ 6 ಲಕ್ಷ, 2021ರಲ್ಲಿ 9 ಲಕ್ಷ ಹಣತೆಗಳನ್ನು ಬೆಳಗುವ ಮೂಲಕ ಗಿನ್ನೆಸ್‌ ದಾಖಲೆ ನಿರ್ಮಿಸಲಾಗಿತ್ತು. ಈ ವರ್ಷ 14 ಲಕ್ಷ ದೀಪಗಳನ್ನು ಬೆಳಗುವ ಮೂಲಕ ಹೊಸ ದಾಖಲೆ ನಿರ್ಮಿಸಲು ಸಿದ್ಧತೆ ನಡೆಸಲಾಗುತ್ತಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.