ADVERTISEMENT

ಹೈದರಾಬಾದ್‌: ಕೃಷ್ಣ ಜನ್ಮಾಷ್ಟಮಿ ವೇಳೆ ವಿದ್ಯುತ್‌ ತಗುಲಿ ಆರು ಮಂದಿ ಸಾವು

ಪಿಟಿಐ
Published 18 ಆಗಸ್ಟ್ 2025, 5:21 IST
Last Updated 18 ಆಗಸ್ಟ್ 2025, 5:21 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಪ್ರಜಾವಾಣಿ ಚಿತ್ರ

ಹೈದರಾಬಾದ್‌: ಇಲ್ಲಿನ ರಾಮನಾಥಪುರದ ಗೋಖಲೆ ನಗರದಲ್ಲಿ ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಭಾನುವಾರ ರಾತ್ರಿ ನಡೆಯುತ್ತಿದ್ದ ಕೃಷ್ಣನ ಮೂರ್ತಿಯ ಮೆರವಣಿಗೆಯಲ್ಲಿ ರಥವು ವಿದ್ಯುತ್‌ ತಂತಿಗೆ ತಗುಲಿದ ಪರಿಣಾಮ ವಿದ್ಯುತ್‌ ಪ್ರವಹಿಸಿ ಆರು ಮಂದಿ ಸಾವಿಗೀಡಾಗಿದ್ದಾರೆ. ನಾಲ್ಕು ಮಂದಿಗೆ ಗಂಭೀರ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಸುಮಾರು 10 ಮಂದಿ ರಥವನ್ನು ಎಳೆಯುತ್ತಿದ್ದರು. ರಸ್ತೆ ಮೇಲೆ ಹಾದುಹೋಗಿದ್ದ ವಿದ್ಯುತ್‌ ತಂತಿಗೆ ರಥ ತಾಗಿದ್ದರಿಂದ ವಿದ್ಯುತ್‌ ಪ್ರವಹಿಸಿತ್ತು. ವಿದ್ಯುತ್ ಆಘಾತದಿಂದ ಸ್ಥಳದಲ್ಲೇ ಐವರು ಮೃತಪಟ್ಟರೆ, ಒಬ್ಬರು ಆಸ್ಪತ್ರೆಯಲ್ಲಿ ಸಾವಿಗೀಡಾದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.