ನವದೆಹಲಿ: ಹೈದರಾಬಾದ್ ವಿಮೋಚನಾ ದಿನದ ಅಂಗವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹೈದರಾಬಾದ್ – ಕರ್ನಾಟಕ, ತೆಲಂಗಾಣ ಮತ್ತು ಮರಾಠವಾಡ ಭಾಗದ ಜನತೆಗೆ ಶುಭಾಶಯ ಕೋರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ‘ಸೆ.17, 1948ರಂದು ಹೈದರಾಬಾದ್ ನಿಜಾಮರ ಆಳ್ವಿಕೆಯಿಂದ ಸ್ವತಂತ್ರ ಹೊಂದಿ, ಭಾರತದ ಒಕ್ಕೂಟದಲ್ಲಿ ವಿಲೀನವಾಯಿತು. ನಿಜಾಮ್ ಮತ್ತು ರಜಾಕರ್ಗಳ ಕ್ರೂರ ಮತ್ತು ಅಮಾನವೀಯ ಆಡಳಿತದಿಂದ ಈ ಪ್ರದೇಶದ ಜನರನ್ನು ಮುಕ್ತಗೊಳಿಸಲು ಧೈರ್ಯದಿಂದ ಹೋರಾಡಿದ ನಮ್ಮ ಧೀರ ಸ್ವಾತಂತ್ರ್ಯ ಹೋರಾಟಗಾರರಿಗೆ ನಾನು ನಮಸ್ಕರಿಸುತ್ತೇನೆ‘ ಎಂದು . # ಹೈದರಾಬಾದ್ ಮುಕ್ತಿಸಂಗ್ರಾಮ್‘ ಎಂಬ ಹ್ಯಾಷ್ಟ್ಯಾಗ್ನೊಂದಿಗೆ ಎಂದು ಶಾ ಟ್ವೀಟ್ ಮಾಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.