ಹೈದರಾಬಾದ್: ಇಲ್ಲಿನ ಹೈದರಾಬಾದ್ ಮೆಟ್ರೊ ರೈಲು ಲಿಮಿಟೆಡ್ನಲ್ಲಿ ಭದ್ರತಾ ಸಿಬ್ಬಂದಿಯಾಗಿ 20 ಮಂದಿ ಲಿಂಗತ್ವ ಅಲ್ಪಸಂಖ್ಯಾತರನ್ನು ತೆಲಂಗಾಣ ಸರ್ಕಾರ ನೇಮಿಸಿದೆ.
ಲಿಂಗತ್ವ ಅಲ್ಪಸಂಖ್ಯಾತರ ರಾಜ್ಯ ಸಚಿವ ಅದ್ಲುರಿ ಲಕ್ಷ್ಮಣ್ ಕುಮಾರ್ ಅವರಿಗೆ ಅರ್ಹರಿಗೆ ನೇಮಕಾತಿ ಪತ್ರವನ್ನು ಹಸ್ತಾಂತರಿಸಿದರು.
‘ಲಿಂಗತ್ವ ಅಲ್ಪಸಂಖ್ಯಾತರು ಕೂಡ ಸ್ವಾಭಿಮಾನದಿಂದ ಬದುಕಬೇಕು ಎಂಬುದು ಮುಖ್ಯಮಂತ್ರಿ ಎ.ರೇವಂತ್ ರೆಡ್ಡಿ ಅವರು ಕನಸು. ಘನತೆಯಿಂದ ಬದುಕಲು ರಾಜ್ಯ ಸರ್ಕಾರವು ಎಲ್ಲ ರೀತಿಯ ನೆರವು ನೀಡಲಿದೆ’ ಎಂದು ಅವರು ಹೇಳಿದರು.
ಈ ವರ್ಷದ ಜನವರಿ ತಿಂಗಳಲ್ಲಿ 39 ಮಂದಿ ಲಿಂಗತ್ವ ಅಲ್ಪಸಂಖ್ಯಾತರನ್ನು ಟ್ರಾಫಿಕ್ ಅಸಿಸ್ಟೆಂಟ್ ಆಗಿ ನೇಮಕಗೊಳಿಸಿ ತೆಲಂಗಾಣ ಸರ್ಕಾರ ಕ್ರಮ ಕೈಗೊಂಡಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.