ಲಖನೌ: ‘ನಾನು ಬಿಜೆಪಿಯ ಐಟಂ ಗರ್ಲ್. ಹೀಗಾಗಿಯೇ, ರಾಜಕೀಯ ಲಾಭಕ್ಕಾಗಿ ನನ್ನ ಹೆಸರು ಬಳಸಿಕೊಳ್ಳುತ್ತಾರೆ...’
–ಹೀಗೆಂದವರು ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್.
ಉತ್ತರ ಪ್ರದೇಶದ ಬದಯುನ್ ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮುಸ್ಲಿಮರನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಚುನಾವಣೆಯಲ್ಲಿ ಮತಗಳ ಧ್ರುವೀಕರಣಕ್ಕಾಗಿ ಬಿಜೆಪಿ ಪದೇ ಪದೇ ನನ್ನ ಹೆಸರು ಉಪಯೋಗಿಸಿಕೊಳ್ಳುತ್ತಿದೆ. 2019ರ ಚುನಾವಣೆಯಲ್ಲಿ ಮತ್ತೆ ಇದು ಮರುಕಳಿಸುವ ನಿರೀಕ್ಷೆ ಇದೆ’ ಎಂದು ಹೇಳಿದರು.
‘ರಾಮ ಮಂದಿರ ನಿರ್ಮಾಣ ವಿಷಯ ಸುಪ್ರೀಂ ಕೋರ್ಟ್ನಲ್ಲಿದೆ. ಆದರೂ, ಬಿಜೆಪಿ ನಾಯಕರು ಈ ವಿಷಯವನ್ನು ಕೆಣಕುತ್ತಾರೆ. ಪ್ರತಿಯೊಬ್ಬರು ನ್ಯಾಯಾಲಯ ನೀಡುವ ತೀರ್ಪಿಗೆ ಕಾಯಬೇಕು. ಬಾಬರಿ ಮಸೀದಿ ಧ್ವಂಸ ಮಾಡಿದ ಶಕ್ತಿಗಳೇ ಇಂದು ತೀರ್ಪಿಗೆ ಕಾಯದೆ ವಿವಾದಿತ ಪ್ರದೇಶದಲ್ಲಿ ಮಂದಿರ ನಿರ್ಮಾಣಕ್ಕೆ ಪ್ರಯತ್ನಿಸುತ್ತಿವೆ’ ಎಂದು ದೂರಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.