ADVERTISEMENT

ನನ್ನ ಪ್ರಾಣ ಕೊಡಲು ಸಿದ್ಧ, ಆದರೆ ರಾಜಿ ಮಾಡಿಕೊಳ್ಳುವುದಿಲ್ಲ: ಮಮತಾ ಬ್ಯಾನರ್ಜಿ

​ಪ್ರಜಾವಾಣಿ ವಾರ್ತೆ
Published 4 ಫೆಬ್ರುವರಿ 2019, 12:41 IST
Last Updated 4 ಫೆಬ್ರುವರಿ 2019, 12:41 IST
   

ಕೋಲ್ಕತ್ತ: ನಾನು ಪ್ರಾಣ ಕೊಡಲು ಸಿದ್ಧ ಆದರೆ ರಾಜಿ ಮಾಡಿಕೊಳ್ಳಲಾರೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ನೀವು ಟಿಎಂಸಿ ನೇತಾರರನ್ನು ಮುಟ್ಟಿದಾಗ ನಾವು ರಸ್ತೆಗಿಳಿದು ಪ್ರತಿಭಟಿಸಿಲ್ಲ. ಆದರೆ ಕೋಲ್ಕತ್ತ ಪೊಲೀಸ್ ಆಯುಕ್ತರನ್ನು ನೀವು ಅವಮಾನ ಮಾಡಿದ್ದು ನನಗೆ ಸಿಟ್ಟು ತಂದಿದೆ.

ಧರಣಿ ಸತ್ಯಾಗ್ರಹ ನಡೆಸುತ್ತಿರುವ ಮಮತಾ ಪಶ್ಚಿಮ ಬಂಗಾಳ ಪೊಲೀಸ್ ಮತ್ತು ಕೋಲ್ಕತ್ತ ಪೊಲೀಸರ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದಾರೆ.ಕೋಲ್ಕತ್ತ ಪೊಲೀಸ್ ಆಯುಕ್ತ ರಾಜೀವ್ ಕುಮಾರ್ ಕೂಡಾ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಇದನ್ನೂ ಓದಿ

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.