ADVERTISEMENT

ಮುಂಬೈ: ಮಾಜಿ ಸಚಿವ ಅನಿಲ್ ದೇಶಮುಖ್‌ಗೆ ಸೇರಿದ ವಿವಿಧೆಡೆ ತೆರಿಗೆ ಅಧಿಕಾರಿಗಳ ದಾಳಿ

ಪಿಟಿಐ
Published 17 ಸೆಪ್ಟೆಂಬರ್ 2021, 10:39 IST
Last Updated 17 ಸೆಪ್ಟೆಂಬರ್ 2021, 10:39 IST
ಅನಿಲ್ ದೇಶಮುಖ್‌
ಅನಿಲ್ ದೇಶಮುಖ್‌   

ಮುಂಬೈ: ತೆರಿಗೆ ವಂಚನೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್‌ ದೇಶಮುಖ್ ಅವರಿಗೆ ಸೇರಿದ ವಿವಿಧ ಸ್ಥಳಗಳಲ್ಲಿ ಶುಕ್ರವಾರ ದಾಳಿ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮುಂಬೈ, ನಾಗಪುರ ಮತ್ತು ರಾಜಸ್ಥಾನದ ಜೈಪುರದಲ್ಲಿ ಮಾಜಿ ಸಚಿವರಿಗೆ ಸೇರಿರುವ ಕೆಲ ಸ್ಥಳಗಳ ಮೇಲೆ ದಾಳಿ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಮಹಾರಾಷ್ಟ್ರದ ಪೊಲೀಸ್‌ ಇಲಾಖೆಯಲ್ಲಿನ ‘ಕಿಕ್‌ ಬ್ಯಾಕ್‌’ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅನಿಲ್‌ ದೇಶಮುಖ್ ಅವರ ವಿರುದ್ಧ ಕೇಂದ್ರ ತನಿಖಾ ದಳ (ಸಿಬಿಐ) ಮತ್ತು ಜಾರಿ ನಿರ್ದೇಶನಾಲಯ (ಇ.ಡಿ) ತನಿಖೆ ನಡೆಸುತ್ತಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.