ಹೈದರಾಬಾದ್: ತೆಲಂಗಾಣ ಹಾಗೂ ಆಂಧ್ರಪ್ರದೇಶ ರಾಜ್ಯಗಳಲ್ಲಿ 20ಕ್ಕೂ ಹೆಚ್ಚು ಕಡೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಮಂಗಳವಾರ ಬೆಳಗ್ಗೆಹೈದರಾಬಾದ್ನ ಬಂಜಾರಾ ಹಿಲ್ಸ್,ಜುಬಿಲಿ ಹಿಲ್ಸ್ ಹಾಗೂ ವಿಜಯವಾಡಗಳಲ್ಲಿ ದಾಳಿ ನಡೆಸಿದ ಅಧಿಕಾರಿಗಳುಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ವಿಜಯವಾಡದಲ್ಲಿ ಗನ್ನವರಂ ಶಾಸಕರ ಮನೆ, ಕಚೇರಿಗಳ ಮನೆ ದಾಳಿ ಮಾಡಲಾಗಿದೆ.
ಹೈದರಾಬಾದ್ನಲ್ಲಿ ಸ್ಥಳೀಯ ರಾಜಕೀಯ ಮುಖಂಡರು, ಉದ್ಯಮಿಗಳು ಹಾಗೂ ರಿಯಲ್ ಎಸ್ಟೇಟ್ ಉದ್ಯಮಿಗಳ ಕಚೇರಿ, ಮನೆಗಳ ಮೇಲೆ ದಾಳಿ ಮಾಡಲಾಗಿದೆ.
ಈ ದಾಳಿಯ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.