ತಿರುವನಂತಪುರ: ಕೇರಳದ ಇಬ್ಬರು ಪ್ರಭಾವಿ ಉದ್ಯಮಿಗಳಿಗೆ ಸೇರಿದ ವಿವಿಧ ಸ್ಥಳಗಳಲ್ಲಿ ಆದಾಯ ತೆರಿಗೆ (ಐ.ಟಿ) ಅಧಿಕಾರಿಗಳು ಸೋಮವಾರ ಶೋಧ ಕಾರ್ಯ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ಇಬ್ಬರು ಉದ್ಯಮಿಗಳ ರಿಯಲ್ ಎಸ್ಟೇಟ್ ವ್ಯವಹಾರಗಳಿಗೆ ಸಂಬಂಧಿಸಿ ಕೇರಳ, ತಮಿಳುನಾಡು ರಾಜ್ಯಗಳ ವಿವಿಧೆಡೆ ಮತ್ತು ಬೆಂಗಳೂರು, ಮುಂಬೈನಲ್ಲೂ ಶೋಧ ಕಾರ್ಯ ನಡೆದಿದೆ ಎಂದೂ ಹೇಳಿವೆ.
ಒಬ್ಬ ಉದ್ಯಮಿ ಕೇರಳದ ಪ್ರಮುಖ ರಾಜಕಾರಣಿಗಳಿಗೆ ಆಪ್ತರಾಗಿದ್ದಾರೆ ಎಂದೂ ವಿವರಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.