ADVERTISEMENT

ಜನರಿಗೆ ಒಳ್ಳೆಯದನ್ನು ಮಾಡು ಎಂದು ಅಜಿತ್‌ಗೆ ಹೇಳಿದೆ: ಉದ್ಧವ್ ಠಾಕ್ರೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 19 ಜುಲೈ 2023, 15:58 IST
Last Updated 19 ಜುಲೈ 2023, 15:58 IST
ಉದ್ಧವ್ ಠಾಕ್ರೆ
ಉದ್ಧವ್ ಠಾಕ್ರೆ   

ಮುಂಬೈ: ರಾಜ್ಯಕ್ಕೆ ಮತ್ತು ಜನರಿಗೆ ಒಳ್ಳೆಯದನ್ನು ಮಾಡು ಎಂದು ಉಪ ಮುಖ್ಯಮಂತ್ರಿ, ಹಣಕಾಸು ಸಚಿವ ಅಜಿತ್ ಪವಾರ್‌ಗೆ ಹೇಳಿರುವೆ ಎಂದು ಶಿವಸೇನಾ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಹೇಳಿದ್ದಾರೆ

ಮಹಾರಾಷ್ಟ್ರದಲ್ಲಿ ಮುಖ್ಯಮಂತ್ರಿ ಏಕನಾಥ ಶಿಂದೆ ನೇತೃತ್ವದ ಸರ್ಕಾರಕ್ಕೆ ಸೇರಿದ ನಂತರ ಇದೇ ಮೊದಲ ಸಲ ಸಚಿವ ಅಜಿತ್ ಪವಾರ್ ಅವರನ್ನು ಉದ್ಧವ್ ಠಾಕ್ರೆ ಬುಧವಾರ ಭೇಟಿ ಮಾಡಿದರು. ಸುಮಾರು 2 ತಾಸುಗಳಿಗೂ ಹೆಚ್ಚು ಕಾಲ ಮಾತುಕತೆ ನಡೆಸಿದರು ಎಂದು ವರದಿಯಾಗಿದೆ.

ಭೇಟಿಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಉದ್ಧವ್, ‘ರಾಜ್ಯಕ್ಕೆ ಮತ್ತು ಜನರಿಗೆ ಒಳ್ಳೆಯದನ್ನು ಮಾಡು’ ಎಂದು ಅಜಿತ್ ಅವರಿಗೆ ನಾನು ಕೇಳಿದೆ ಎಂದು ಹೇಳಿದರು. 

ADVERTISEMENT

ಅಜಿತ್‌ ಬಳಿ ರಾಜ್ಯದ ಖಜಾನೆಯ ಬೀಗದ ಕೈ ಇರುವುದರಿಂದ ಅವರು ರಾಜ್ಯ ಮತ್ತು ಜನರಿಗೆ ಸಹಾಯ ಮಾಡುವರು ಎನ್ನುವ ವಿಶ್ವಾಸವಿದೆ ಎಂದು ಉದ್ಧವ್ ಠಾಕ್ರೆ ಹೇಳಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.