ADVERTISEMENT

ಅಮೇಠಿಯಲ್ಲಿ ರಾಹುಲ್ ಸೋತರೆ ರಾಜಕೀಯ ತ್ಯಜಿಸುವೆ: ನವಜೋತ್ ಸಿಂಗ್ ಸಿಧು

​ಪ್ರಜಾವಾಣಿ ವಾರ್ತೆ
Published 29 ಏಪ್ರಿಲ್ 2019, 10:24 IST
Last Updated 29 ಏಪ್ರಿಲ್ 2019, 10:24 IST
   

ರಾಯ್‍ಬರೇಲಿ: ಅಮೇಠಿಯಲ್ಲಿ ರಾಹುಲ್ ಗಾಂಧಿ ಪರಾಭವಗೊಂಡರೆ ತಾವು ರಾಜಕೀಯ ತ್ಯಜಿಸುವುದಾಗಿ ಹೇಳಿದಮಾಜಿ ಕ್ರಿಕೆಟಿಗ, ರಾಜಕಾರಣಿ ನವಜೋತ್ ಸಿಂಗ್ ಸಿಧುಜನರು ರಾಷ್ಟ್ರೀಯತೆಯನ್ನು ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಂದ ಕಲಿಯಬೇಕು ಎಂದಿದ್ದಾರೆ.

ಈ ಹಿಂದೆ ಬಿಜೆಪಿ ನಾಯಕರಾಗಿದ್ದ ಸಿಧು, ಪಂಜಾಬ್‌ನಲ್ಲಿರುವ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರಾಗಿದ್ದಾರೆ.

ಕಳೆದ 70 ವರ್ಷಗಳಲ್ಲಿ ದೇಶದಲ್ಲಿ ಯಾವುದೇ ಆರ್ಥಿಕ ಬೆಳವಣಿಗೆ ಆಗಿಲ್ಲ ಎಂಬ ಬಿಜೆಪಿ ವಾದವನ್ನು ತಳ್ಳಿದ ಸಿಧು, ಕಾಂಗ್ರೆಸ್ ಅಧಿಕಾರವಧಿಯಲ್ಲಿ ಸೂಜಿಯಿಂದ ಹಿಡಿದು ವಿಮಾನವದವರೆಗೆ ಎಲ್ಲ ರೀತಿಯ ಉತ್ಪನ್ನಗಳ ನಿರ್ಮಾಣವಾಗಿದೆ ಎಂದಿದ್ದಾರೆ.

ADVERTISEMENT

ರಾಜೀವ್ ಗಾಂಧಿ ಹತ್ಯೆಯ ನಂತರ ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸಿದ ಸೋನಿಯಾ ಗಾಂಧಿಯನ್ನು ಶ್ಲಾಘಿಸಿದ ಅವರುಸೋನಿಯಾ ನೇತೃತ್ವದಲ್ಲಿ ಕಾಂಗ್ರೆಸ್ 10 ವರ್ಷ ಅಧಿಕಾರ ನಡೆಸುವಂತಾಯಿತು ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.