ADVERTISEMENT

ವಾಯುಪಡೆಯ ದಿನಾಚರಣೆ: ಸೇನೆ ಯುದ್ಧಕ್ಕೆ ಸನ್ನದ್ಧವಾಗಿದೆ–ವಿ.ಆರ್.ಚೌಧರಿ

ಪಿಟಿಐ
Published 8 ಅಕ್ಟೋಬರ್ 2021, 6:37 IST
Last Updated 8 ಅಕ್ಟೋಬರ್ 2021, 6:37 IST
ನವದೆಹಲಿಯಲ್ಲಿ ಶುಕ್ರವಾರ 89 ನೇ ವಾಯುಪಡೆ ದಿನಾಚರಣೆಯಲ್ಲಿ ಪ್ರಯುಕ್ತ  ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್, ಸೇನಾಪಡೆ ಮುಖ್ಯಸ್ಥ ಜನರಲ್ ಎಂ.ಎಂ.ನರವಣೆ, ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ಕರಂಬೀರ್ ಸಿಂಗ್ ಮತ್ತು ವಾಯುಪಡೆ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿ.ಆರ್.ಚೌಧರಿ ಯುದ್ಧ ಸ್ಮಾರಕಕ್ಕೆ ಪುಷ್ಪಗುಚ್ಛ ಅರ್ಪಿಸಿದರು –ಪಿಟಿಐ ಚಿತ್ರ
ನವದೆಹಲಿಯಲ್ಲಿ ಶುಕ್ರವಾರ 89 ನೇ ವಾಯುಪಡೆ ದಿನಾಚರಣೆಯಲ್ಲಿ ಪ್ರಯುಕ್ತ  ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್, ಸೇನಾಪಡೆ ಮುಖ್ಯಸ್ಥ ಜನರಲ್ ಎಂ.ಎಂ.ನರವಣೆ, ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ಕರಂಬೀರ್ ಸಿಂಗ್ ಮತ್ತು ವಾಯುಪಡೆ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿ.ಆರ್.ಚೌಧರಿ ಯುದ್ಧ ಸ್ಮಾರಕಕ್ಕೆ ಪುಷ್ಪಗುಚ್ಛ ಅರ್ಪಿಸಿದರು –ಪಿಟಿಐ ಚಿತ್ರ   

ಹಿಂಡೊನ್‌ (ಉತ್ತರಪ್ರದೇಶ): ಕಳೆದ ವರ್ಷ ಪೂರ್ವ ಲಡಾಖ್‌ ಗಡಿಭಾಗದಲ್ಲಿ ನಡೆದ ಬೆಳವಣಿಗೆಗಳಿಗೆ ಪ್ರತಿಕ್ರಿಯೆಯಾಗಿ ಭಾರತೀಯ ವಾಯು ಪಡೆಯ ತ್ವರಿತ ಕ್ರಮಗಳನ್ನು ಕೈಗೊಂಡಿದ್ದು, ಇದು ಸೇನೆ ಯುದ್ಧಕ್ಕೆ ಸಿದ್ಧವಾಗಿರುವುದಕ್ಕೆ ಸಾಕ್ಷಿ ಎಂದು ವಾಯುಪಡೆ ಏರ್ ಚೀಫ್ ಮಾರ್ಷಲ್ ವಿ.ಆರ್.ಚೌಧರಿ ಶುಕ್ರವಾರ ಹೇಳಿದ್ದಾರೆ.

ದೆಹಲಿಯ ಹೊರವಲಯದ ಹಿಂಡೊನ್‌ ವಾಯುನೆಲೆಯಲ್ಲಿ ಶುಕ್ರವಾರ ನಡೆದ 89ನೇ ವಾಯುಪಡೆಯ ದಿನಾಚರಣೆಯಲ್ಲಿ ಯೋಧರನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಬಾಹ್ಯ ಶಕ್ತಿಗಳು ನಮ್ಮ ಪ್ರದೇಶವನ್ನು ಅತಿಕ್ರಮಿಸಲು ಬಿಡುವುದಿಲ್ಲ‘ ಎಂಬುದನ್ನು ಭಾರತೀಯ ವಾಯುಪಡೆ, ರಾಷ್ಟ್ರಕ್ಕೆ ತೋರಿಸಲೇಬೇಕಾಗಿದೆ ಎಂದರು.

‘ನಮ್ಮ ಸವಾಲುಗಳು ಹೆಚ್ಚುತ್ತಿರುವಂತೆಯೇ, ಅದನ್ನು ಎದುರಿಸಲು ನಮ್ಮ ಬಲದ ಜೊತೆಗೆ, ವಾಯುಪಡೆಯ ಶಕ್ತಿಯನ್ನು ಸಮರ್ಥವಾಗಿ ಬಳಸಿಕೊಳ್ಳುವ ಸಂಕಲ್ಪವೂ ಹೆಚ್ಚುತ್ತಿದೆ. ಹಾಗೆಯೇ, ನಮ್ಮ ದೇಶದ ಭದ್ರತಾ ವ್ಯವಸ್ಥೆಯನ್ನು ನೋಡಿದಾಗ, ನಾನು ನಿರ್ಣಾಯಕ ಸಮಯದಲ್ಲಿ ಜವಾಬ್ದಾರಿ ವಹಿಸಿಕೊಂಡಿದ್ದೇನೆ ಎಂಬುದನ್ನೂ ಅರಿತಿದ್ದೇನೆ‘ ಎಂದು ಅವರು ಹೇಳಿದರು.

ADVERTISEMENT

‘ನಮ್ಮ ದೇಶದೊಳಗೆ ಬಾಹ್ಯಶಕ್ತಿಗಳು ಅತಿಕ್ರಮಿಸಲು ಬಿಡುವುದಿಲ್ಲ‘ ಎಂಬದನ್ನು ನಾವು ರಾಷ್ಟ್ರಕ್ಕೆ ತೋರಿಸಬೇಕಿದೆ. ಇದಕ್ಕೆ ಬೇಕಾದ ಸೂಕ್ತ ನಿರ್ದೇಶನ, ಉತ್ತಮ ನಾಯಕತ್ವ ಮತ್ತು ನನಗೆ ಸಾಧ್ಯವಾಗುವಷ್ಟು ಎಲ್ಲ ರೀತಿಯ ಅತ್ಯುತ್ತಮ ಸಂಪನ್ಮೂಲಗಳನ್ನು ಒದಗಿಸುವ ಪ್ರಯತ್ನ ಮಾಡುತ್ತೇನೆ‘ ಎಂದು ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.