ADVERTISEMENT

‘ಗಾಂಧಿ ಪ್ರತಿಮೆ ನಿರ್ಮೂಲನಕ್ಕೆ ಸಕಾಲ’ ಎಂದಿದ್ದ ಅಧಿಕಾರಿ ನಿಧಿ ಚೌಧರಿ ವರ್ಗ

ಪಿಟಿಐ
Published 3 ಜೂನ್ 2019, 14:34 IST
Last Updated 3 ಜೂನ್ 2019, 14:34 IST
ನಿಧಿ ಚೌಧರಿ
ನಿಧಿ ಚೌಧರಿ   

ಮುಂಬೈ: ‘ಮಹಾತ್ಮ ಗಾಂಧಿಯವರ ಪ್ರತಿಮೆಗಳ ನಿರ್ಮೂಲನೆಗೆ ಸಕಾಲ’ ಎಂದು ಟ್ವೀಟ್ ಮಾಡಿದ್ದ ಮಹಾರಾಷ್ಟ್ರದ ಐಎಎಸ್ ಅಧಿಕಾರಿ ನಿಧಿ ಚೌಧರಿ ಅವರನ್ನು ವರ್ಗಾವಣೆ ಮಾಡಲಾಗಿದೆ.

‘ಮುಂಬೈ ಮಹಾನಗರ ಪಾಲಿಕೆಯಿಂದ ಅವರನ್ನು ನೀರು ಸರಬರಾಜು ಇಲಾಖೆಗೆ ವರ್ಗಾವಣೆ ಮಾಡಲಾಗಿದೆ. ಅಲ್ಲದೆ ಈ ರೀತಿ ಟ್ವೀಟ್ ಮಾಡಿದ್ದಕ್ಕಾಗಿ ಮಹಾರಾಷ್ಟ್ರ ಸರ್ಕಾರ ಅವರಿಗೆ ಶೋಕಾಸ್ ನೋಟಿಸ್ ನೀಡಿದೆ’ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

‘ಗಾಂಧಿ ಕುರಿತು ವಿವಾದಾತ್ಮಕ ಟ್ವೀಟ್ ಮಾಡಿದ್ದಕ್ಕಾಗಿ ಚೌಧರಿ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರಿಗೆ ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಪತ್ರ ಬರೆದಿದ್ದರು. ಇದರ ಬೆನ್ನಲ್ಲೇ ನಿಧಿ ಚೌಧರಿ ಅವರನ್ನು ವರ್ಗಾವಣೆ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.