ಶ್ರೀನಗರ: ಪಿಡಿಪಿಯನ್ನು ಒಡೆಯಲು ಯತ್ನಿಸಿದರರೆ ಪರಿಣಾಮ ಚೆನ್ನಾಗಿರಲ್ಲ ಎಂದು ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬ ಮುಫ್ತಿ ಗುಡುಗಿದ್ದಾರೆ.
ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಮುಫ್ತಿ, ದೆಹಲಿಯಲ್ಲಿರುವ ಬಿಜೆಪಿ, ಪಿಡಿಪಿಯನ್ನು ಒಡೆಯಲು ಯತ್ನಿಸಿದರೆ ಪರಿಣಾಮ ಚೆನ್ನಾಗಿರುವುದಿಲ್ಲ ಎಂದಿದ್ದಾರೆ.
ಬಿಜೆಪಿ- ಪಿಡಿಪಿಮೂರು ವರ್ಷ ಜಮ್ಮು ಕಾಶ್ಮೀರದಲ್ಲಿ ಮೈತ್ರಿ ಸರ್ಕಾರ ನಡೆಸಿತ್ತು, ಕಳೆದ ಜೂನ್ ತಿಂಗಳಲ್ಲಿ ಈ ಮೈತ್ರಿ ಮುರಿದಿತ್ತು.
ಮುಫ್ತಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಜೂನ್ 20ರಿಂದ ಇಲ್ಲಿ ರಾಜ್ಯಪಾಲರ ಆಡಳಿತ ನಡೆಯುತ್ತಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.