ADVERTISEMENT

ಡಿಎಂಕೆ ಅಂದರೆ ಡೆಂಗಿ, ಮಲೇರಿಯಾ, ಸೊಳ್ಳೆ: ಅಣ್ಣಾಮಲೈ ಟೀಕೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 7 ಸೆಪ್ಟೆಂಬರ್ 2023, 16:08 IST
Last Updated 7 ಸೆಪ್ಟೆಂಬರ್ 2023, 16:08 IST
<div class="paragraphs"><p>ಕೆ. ಅಣ್ಣಾಮಲೈ</p></div>

ಕೆ. ಅಣ್ಣಾಮಲೈ

   

ಚೆನ್ನೈ: ಸನಾತನ ಧರ್ಮ ಕುರಿತು ತಮಿಳುನಾಡು ಸಚಿವ, ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್‌ ನೀಡಿದ ಹೇಳಿಕೆಗೆ ತಮಿಳುನಾಡಿನ ಬಿಜೆಪಿ ಘಟಕದ ಅಧ್ಯಕ್ಷ ಕೆ. ಅಣ್ಣಾಮಲೈ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.

ಡಿಎಂಕೆ ಅಂದರೆ ಡೆಂಗಿ, ಮಲೇರಿಯಾ, ಕೊಸು (ಸೊಳ್ಳೆ) ಎಂದು ಟೀಕಿಸಿದ್ದಾರೆ.

ADVERTISEMENT

ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅಣ್ಣಾಮಲೈ, ತಮಿಳುನಾಡಿನಿಂದ ಡಿಎಂಕೆ ಪಕ್ಷವನ್ನೇ ನಿರ್ಮೂಲನೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಸನಾತನ ಧರ್ಮ ಮಲೇರಿಯಾ, ಡೆಂಗಿ, ಕೊರೊನಾ ರೋಗ ಇದ್ದಂತೆ. ಅದನ್ನು ನಿರ್ಮೂಲನೆ ಮಾಡಬೇಕು ಎಂದು ಇತ್ತೀಚೆಗೆ ಚೆನ್ನೈನಲ್ಲಿ ನಡೆದ ಸಭೆಯಲ್ಲಿ ಉದಯನಿಧಿ ಹೇಳಿದ್ದರು. ಇದರಿಂದ ವಿವಾದ ಭುಗಿಲೆದ್ದಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.