ADVERTISEMENT

ಯಾವ ಸ್ಥಳದವರನ್ನು ಪಶ್ಚಿಮ ಬಂಗಾಳದಲ್ಲಿ ಒಳಗಿನವರು ಎನ್ನಲಾಗುತ್ತದೆ? ಕೇಂದ್ರ ಸಚಿವ

ಪಿಟಿಐ
Published 4 ಜನವರಿ 2021, 10:54 IST
Last Updated 4 ಜನವರಿ 2021, 10:54 IST
ಅನುರಾಗ್‌ ಠಾಕೂರ್‌
ಅನುರಾಗ್‌ ಠಾಕೂರ್‌   

ಕೋಲ್ಕತ್ತ: ‘ಕೇಂದ್ರ ಸಚಿವರೇಪಶ್ಚಿಮ ಬಂಗಾಳದಲ್ಲಿ ಹೊರಗಿನವರಾದರೆ, ಯಾವ ಸ್ಥಳದವರನ್ನು ಒಳಗಿನವರು ಎಂದು ಪರಿಗಣಿಸಲಾಗುತ್ತದೆ’ ಎಂದು ಕೇಂದ್ರ ಸಚಿವ ಅನುರಾಗ್‌ ಠಾಕೂರ್‌ ಅವರು ಪ್ರಶ್ನಿಸಿದ್ದಾರೆ.

‘ಪಶ್ಚಿಮ ಬಂಗಾಳವೂ ದೇಶದ ಪ್ರಮುಖ ಭಾಗವಾಗಿದೆ. ಕೇಂದ್ರ ಸಚಿವರು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡುವುದು ಅಪರಾಧವೇ‘ ಎಂದು ಪ್ರಶ್ನಿಸಿದ್ದಾರೆ.

ನೇತಾಜಿ ಸುಭಾಷ್ ಚಂದ್ರ ಭೋಸ್‌ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅವರುಸುದ್ದಿಗಾರರ ಜೊತೆಗೆ ಮಾತನಾಡಿದರು.

ADVERTISEMENT

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಕ್ಕೆ ಹೊರಗಿನವರನ್ನು ಕರೆತರುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಟೀಕಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.