ADVERTISEMENT

ನಾನು ಸಿಎಂ, ದೇಶ ಬಿಟ್ಟು ಹೋಗುವವನಲ್ಲ: ಜಾರ್ಖಂಡ್ ಸಿಎಂ ಸೊರೇನ್

ಪಿಟಿಐ
Published 17 ನವೆಂಬರ್ 2022, 9:31 IST
Last Updated 17 ನವೆಂಬರ್ 2022, 9:31 IST
ಹೇಮಂತ್ ಸೊರೇನ್
ಹೇಮಂತ್ ಸೊರೇನ್   

ರಾಂಚಿ: ಜಾರ್ಖಂಡ್‌ನಲ್ಲಿ ನಡೆದಿದೆ ಎನ್ನಲಾಗಿರುವ ಅಕ್ರಮ ಗಣಿಗಾರಿಕೆ ಸಂಬಂಧ ನನ್ನ ವಿರುದ್ಧ ಹೊರಿಸಲಾದ ಆರೋಪಗಳು ಆಧಾರರಹಿತವಾಗಿವೆ ಎಂದು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಗುರುವಾರ ಹೇಳಿದ್ದಾರೆ.

ಗಣಿಗಾರಿಕೆ ಗುತ್ತಿಗೆ ನೀಡಿದ ಪ್ರಕರಣದಲ್ಲಿ ಹಣ ಅಕ್ರಮ ವರ್ಗಾವಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸೊರೇನ್ ಅವರು ಜಾರಿ ನಿರ್ದೇಶನಾಲಯದ (ಇ.ಡಿ) ವಿಚಾರಣೆ ಎದುರಿಸುತ್ತಿದ್ದಾರೆ.

ಈ ಕುರಿತು ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದ ಸೊರೇನ್, ವಿರೋಧ ಪಕ್ಷಗಳ ಷಡ್ಯಂತ್ರಕ್ಕೆ ನನ್ನನ್ನು ಬಲಿಪಶು ಮಾಡಲಾಗಿದೆ. ಸರ್ಕಾರವನ್ನು ಅಸ್ಥಿರಗೊಳಿಸಲು ಸಂಚು ಹೂಡಲಾಗಿದೆ ಎಂದು ಆರೋಪಿಸಿದರು.

ವಿವರವಾದ ತನಿಖೆಯ ಬಳಿಕವಷ್ಟೇ ಏಜೆನ್ಸಿಗಳು ಅಂತಿಮ ತೀರ್ಮಾನಕ್ಕೆ ಬರಬೇಕು. ನಾನೊಬ್ಬ ಮುಖ್ಯಮಂತ್ರಿ. ಸಮನ್ಸ್ ನೀಡುವ ರೀತಿ ನೋಡಿದರೆ ನಾನೇನು ದೇಶ ಬಿಟ್ಟು ಓಡಿ ಹೋಗುವವನಂತೆ ಬಿಂಬಿಸಲಾಗುತ್ತಿದೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.