ADVERTISEMENT

PHOTOS | ವಿಮಾನ ಅಪಘಾತದಲ್ಲಿ ಮೃತಪಟ್ಟ ಭಾರತದ ಗಣ್ಯ ವ್ಯಕ್ತಿಗಳು

ಗಣ್ಯರು ಅತಿಗಣ್ಯ ವ್ಯಕ್ತಿಗಳ ಸಂಚಾರಕ್ಕೆ ಹೆಲಿಕಾಪ್ಟರ್‌ಗಳನ್ನು ಬಳಸಲಾಗುತ್ತದೆ. ಪೈಲಟ್ ಅಜಾಗರೂಕತೆ, ಪ್ರತಿಕೂಲ ಹವಾಮಾನ ಮೊದಲಾದ ಕಾರಣದಿಂದ ಕಾಪ್ಟರ್‌ಗಳು ಅಪಘಾತಕ್ಕೀಡಾಗುತ್ತವೆ. ವೈ.ಎಸ್. ರಾಜಶೇಖರ ರೆಡ್ಡಿ, ದೋರ್ಜಿ ಖಂಡು, ಸಂಜಯ್ ಗಾಂಧಿ, ಮಾಧವರಾವ್ ಸಿಂಧಿಯಾ, ಜಿಎಂಸಿ ಬಾಲಯೋಗಿ, ಒ.ಪಿ. ಜಿಂದಾಲ್, ಮೊದಲಾದ ಗಣ್ಯರು ಹೆಲಿಕಾಪ್ಟರ್ ಅಪಘಾತಕ್ಕೆ ಬಲಿಯಾಗಿದ್ದಾರೆ.

​ಪ್ರಜಾವಾಣಿ ವಾರ್ತೆ
Published 10 ಡಿಸೆಂಬರ್ 2021, 9:41 IST
Last Updated 10 ಡಿಸೆಂಬರ್ 2021, 9:41 IST
ಜೀವಕ್ಕೆ ಎರವಾದ ಹೆಲಿಕಾಪ್ಟರ್ ಪಯಣ
ಜೀವಕ್ಕೆ ಎರವಾದ ಹೆಲಿಕಾಪ್ಟರ್ ಪಯಣ   
ನೇತಾಜಿ ಸುಭಾಷ್ ಚಂದ್ರ ಬೋಸ್: ತೈವಾನ್‌ನಲ್ಲಿ ನಡೆದ ವಿಮಾನ ಅಪಘಾತದಲ್ಲಿ ಸ್ವಾತಂತ್ರ್ಯ ಹೋರಾಟಗಾರ ಸುಭಾಷ್ ಚಂದ್ರ ಬೋಸ್ ಮೃತಪಟ್ಟರು ಎಂದು ಹೇಳಲಾಗುತ್ತಿದೆ. ಆದರೆ ಅವರ ಸಾವಿನ ಬಗೆಗಿನ ವಿವಾದ ಇನ್ನೂ ಬಗೆಹರಿದಿಲ್ಲ. (ಕೃಪೆ: ವಿಕಿಮೀಡಿಯಾ ಕಾಮನ್ಸ್)
ವೈಎಸ್‌ಆರ್‌ ರೆಡ್ಡಿ: 2009ರ ಸೆಪ್ಟೆಂಬರ್‌ನಲ್ಲಿ, ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್. ರಾಜಶೇಖರ ರೆಡ್ಡಿ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ನಲ್ಲಮಲ್ಲ ಅರಣ್ಯದಲ್ಲಿ ಪತನವಾಗಿತ್ತು. 27 ಗಂಟೆಗಳ ಶೋಧದ ಬಳಿಕ ಅವರ ಮೃತದೇಹ ಪತ್ತೆಯಾಗಿತ್ತು. (ಕೃಪೆ: ವಿಕಿಮೀಡಿಯಾ ಕಾಮನ್ಸ್)
ಸಂಜಯ್‌ ಗಾಂಧಿ: 1980ರಲ್ಲಿ, ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಮಗ ಸಂಜಯ್ ಗಾಂಧಿ ಅವರು ಪ್ರಯಾಣಿಸುತ್ತಿದ್ದ ಗ್ಲೈಡರ್ ಅಘಾತಕ್ಕೀಡಾಗಿತ್ತು. (ಕೃಪೆ: ವಿಕಿಮೀಡಿಯಾ ಕಾಮನ್ಸ್)
ಮಾಧವರಾವ್ ಸಿಂಧಿಯಾ: 2001ರಲ್ಲಿ, ಕಾಂಗ್ರೆಸ್‌ನ ಹಿರಿಯ ಮುಖಂಡ ಮಾಧವರಾವ್ ಸಿಂಧಿಯಾ ಅವರು ಪ್ರಯಾಣಿಸುತ್ತಿದ್ದ 10 ಸೀಟರ್‌ನ ಸೆಸ್ನಾ ಸಿ–90 ವಿಮಾನವು ಉತ್ತರ ಪ್ರದೇಶದ ಕಾನ್ಪುರಕ್ಕೆ ತೆರಳುವ ಮಾರ್ಗಮಧ್ಯೆ ದುರಂತಕ್ಕೀಡಾಯಿತು. ಸಿಂಧಿಯಾ ಅವರ ಜೊತೆಗಿದ್ದ ಇತರ ಆರು ಜನರೂ ಸಾವಿಗೀಡಾದರು.
ಬಾಲಯೋಗಿ: ಲೋಕಸಭೆಯ ಸ್ಪೀಕರ್ ಆಗಿದ್ದ ತೆಲುಗುದೇಶಂ ಪಕ್ಷದ ಜಿ.ಎಂ.ಸಿ. ಬಾಲಯೋಗಿ ಅವರು 2002ರ ಮಾರ್ಚ್‌ನಲ್ಲಿ ಹೆಲಿಕಾಪ್ಟರ್ ಅಪಘಾತದಲ್ಲಿ ಮೃತಪಟ್ಟರು. (ಕೃಪೆ: ವಿಕಿಮೀಡಿಯಾ ಕಾಮನ್ಸ್)
ಒ.ಪಿ. ಜಿಂದಾಲ್: ಹರಿಯಾಣದ ಅಂದಿನ ಇಂಧನ ಸಚಿವ ಹಾಗೂ ಪ್ರಸಿದ್ಧ ಉದ್ಯಮಿ ಒ.ಪಿ. ಜಿಂದಾಲ್ 2005ರ ಮಾರ್ಚ್‌ 31ರಂದು ಹೆಲಿಕಾಪ್ಟರ್ ಅಪಘಾತದಲ್ಲಿ ಸಾವಿಗೀಡಾದರು.
ಸುರೇಂದ್ರ ನಾಥ್: 1994ರಲ್ಲಿ ಹಿಮಾಚಲ ಪ್ರದೇಶದಲ್ಲಿ ಪ್ರತಿಕೂಲ ಹವಾಮಾನದಿಂದಾಗಿ ಪಂಜಾಬ್ ಗವರ್ನರ್ ಸುರೇಂದ್ ನಾಥ್ ಮತ್ತು ಅವರ ಕುಟಂಬದ ಒಂಬತ್ತು ಸದಸ್ಯರು ವಿಮಾನ ಅಪಘಾತದಲ್ಲಿ ಮೃತಪಟ್ಟರು.
ದೋರ್ಜಿ ಖಂಡು: 2011ರಲ್ಲಿ, ಅರುಣಾಚಲ ಪ್ರದೇಶದ ಅಂದಿನ ಮುಖ್ಯಮಂತ್ರಿ ದೋರ್ಜಿ ಖಂಡು ಅವರು ಹೆಲಿಕಾಪ್ಟರ್ ಅಪಘಾತದಲ್ಲಿ ಮೃತಪಟ್ಟಿದ್ದರು. (ಕೃಪೆ: ವಿಕಿಮೀಡಿಯಾ ಕಾಮನ್ಸ್)
ಬಿಪಿನ್ ರಾವತ್: ತಮಿಳುನಾಡಿನ ನೀಲಗಿರಿ ಜಿಲ್ಲೆಯ ಕೂನೂರಿನಲ್ಲಿ ಬುಧವಾರ ಮಧ್ಯಾಹ್ನ ಭಾರತೀಯ ವಾಯುಪಡೆಯ ಎಂಐ–17ವಿ5 ಹೆಲಿಕಾಪ್ಟರ್‌ ಪತನ ಗೊಂಡಿತು. ಈ ದುರಂತದಲ್ಲಿ, ಸೇನಾ ಪಡೆಗಳ ಮುಖ್ಯಸ್ಥ (ಸಿಡಿಎಸ್‌) ಜನರಲ್‌ ಬಿಪಿನ್ ರಾವತ್‌ (63), ಅವರ ಪತ್ನಿ ಮಧುಲಿಕಾ, 7 ಅಧಿಕಾರಿಗಳು ಹಾಗೂ ನಾಲ್ವರು ಸಿಬ್ಬಂದಿ ಮೃತಪಟ್ಟಿದ್ದಾರೆ. (ಕೃಪೆ: ಪಿಟಿಐ ಚಿತ್ರ)
ಸೌಂದರ್ಯ: 2004ರಲ್ಲಿ ಜನಪ್ರಿಯ ನಟಿ ಸೌಂದರ್ಯ ವಿಮಾನ ಅಪಘಾತದಲ್ಲಿ ಮೃತಪಟ್ಟರು. ಬೆಂಗಳೂರಿನಿಂದ ಆಂಧ್ರಪ್ರದೇಶದ ಕರೀಂನಗರಕ್ಕೆ ಬಿಜೆಪಿ ಪರ ಚುನಾವಣಾ ಪ್ರಚಾರಕ್ಕೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.