ADVERTISEMENT

ತೆರಿಗೆ ವಂಚನೆ: ಜೀ ಸಮೂಹದ ಕಚೇರಿಗಳ ಮೇಲೆ ಐಟಿ ದಾಳಿ

ಪಿಟಿಐ
Published 4 ಜನವರಿ 2021, 14:11 IST
Last Updated 4 ಜನವರಿ 2021, 14:11 IST
ಆದಾಯ ತೆರಿಗೆ ಇಲಾಖೆಯ ಲಾಂಛನ
ಆದಾಯ ತೆರಿಗೆ ಇಲಾಖೆಯ ಲಾಂಛನ   

ಮುಂಬೈ: ‘ತೆರಿಗೆ ವಂಚನೆ ಆರೋಪದ ಹಿನ್ನೆಲೆಯಲ್ಲಿ ಜೀ ಮಾಧ್ಯಮ ಸಮೂಹದ ಕಚೇರಿಗಳ ಮೇಲೆಆದಾಯ ತೆರಿಗೆ ಇಲಾಖೆಯ (ಐಟಿ) ಅಧಿಕಾರಿಗಳು ಸೋಮವಾರ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿದ್ದಾರೆ’ ಎಂದು ಇಲಾಖೆಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

‘ಮುಂಬೈ ಹಾಗೂ ನವದೆಹಲಿಯಲ್ಲಿರುವ ಎಲ್ಲಾ ಕಚೇರಿಗಳ ಮೇಲೆ ಏಕ ಕಾಲದಲ್ಲೇ ದಾಳಿ ನಡೆಸಲಾಗಿದೆ’ ಎಂದೂ ಅವರು ನುಡಿದಿದ್ದಾರೆ.

‘ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ನಮ್ಮ ಕಚೇರಿಗಳಿಗೆ ಭೇಟಿ ನೀಡಿ ದಾಖಲೆಗಳನ್ನು ‍ಪ‍ರಿಶೀಲಿಸಿದ್ದಾರೆ. ನಮ್ಮ ಅಧಿಕಾರಿಗಳು ಅವರಿಗೆ ಅಗತ್ಯ ಮಾಹಿತಿಗಳನ್ನೂ ಒದಗಿಸಿದ್ದಾರೆ. ಅವರಿಗೆ ಸಂಪೂರ್ಣ ಸಹಕಾರವನ್ನೂ ನೀಡಿದ್ದಾರೆ’ ಎಂದು ಜೀ ಸಮೂಹದ ವಕ್ತಾರರ ಪ್ರಕಟಣೆ ತಿಳಿಸಿದೆ.

ADVERTISEMENT

ರಾಜ್ಯಸಭಾ ಸದಸ್ಯ ಸುಭಾಷ್‌ ಚಂದ್ರ ಅವರು ಜೀ ಸಮೂಹದ ಸಂಸ್ಥಾಪಕರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.