ನವದೆಹಲಿ: ಭಾರತ ಮತ್ತು ಚೀನಾ ನಡುವಿನ ಸೇನಾ ಕಮಾಂಡರ್ಗಳ ಮಟ್ಟದ ಮುಂದಿನ ಮಾತುಕತೆ ಶುಕ್ರವಾರ ನಡೆಯುವ ನಿರೀಕ್ಷೆಯಿದೆ.
ಪೂರ್ವ ಲಡಾಕ್ನ ಘರ್ಷಣೆ ನಡೆದ ಸ್ಥಳದಿಂದ ಯೋಧರನ್ನು ಹಿಂದಕ್ಕೆ ಕರೆಸಿಕೊಳ್ಳುವ ಪ್ರಕ್ರಿಯೆಯ ರೂಪುರೇಷೆ ಅಂತಿಮಗೊಳಿಸುವ ಕುರಿತಂತೆ ಈ ಮಾತುಕತೆಯಲ್ಲಿ ಗಮನಹರಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.
ಗೋಗ್ರಾ ಮತ್ತು ಹಾಟ್ಸ್ಟ್ರಿಂಗ್ಸ್ ಪ್ರದೇಶದಲ್ಲಿರುವ ಸೇನೆಯನ್ನು ವಾಪಸ್ ಕರೆಸಿಕೊಳ್ಳುವ ಜೊತೆಗೆ ಡೆಪ್ಸಾಂಗ್ ಬಯಲು ಪ್ರದೇಶಗಳಲ್ಲಿನ ಸಮಸ್ಯೆಗಳನ್ನು ಶೀಘ್ರ ಪರಿಹರಿಸುವಂತೆ ಭಾರತ ಚೀನಾದ ಮೇಲೆ ಒತ್ತಡ ಹೇರಲಿದೆ ಎನ್ನಲಾಗಿದೆ.
ಶುಕ್ರವಾರ ಹನ್ನೊಂದನೇ ಸುತ್ತಿನ ಮಿಲಿಟರಿ ಮಾತುಕತೆ ನಡೆಸುವ ಬಗ್ಗೆ ಎರಡು ಕಡೆಯಿಂದ ಮಾಹಿತಿ ವಿನಿಮಯ ಆಗಿದೆ ಎಂದು ಮೂಲಗಳು ಹೇಳಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.