ADVERTISEMENT

ಕೆನಡಾದಲ್ಲಿ ಜನಾಭಿಪ್ರಾಯ ಸಂಗ್ರಹ: ಭಾರತ ಕಳವಳ

ಪಿಟಿಐ
Published 15 ಅಕ್ಟೋಬರ್ 2022, 4:50 IST
Last Updated 15 ಅಕ್ಟೋಬರ್ 2022, 4:50 IST
ಅರಿಂದಮ್ ಬಾಗ್ಚಿ
ಅರಿಂದಮ್ ಬಾಗ್ಚಿ   

ನವದೆಹಲಿ: ಪ್ರತ್ಯೇಕ ಖಾಲಿಸ್ತಾನದ ಬೇಡಿಕೆಗೆ ಸಂಬಂಧಿಸಿದಂತೆ ಕೆಲ ಭಾರತ ವಿರೋಧಿ ಶಕ್ತಿಗಳು ಕೆನಡಾದಲ್ಲಿ ಜನಾಭಿಪ್ರಾಯ ಸಂಗ್ರಹಕ್ಕೆ ಮುಂದಾಗಿರುವ ಬಗ್ಗೆ ಭಾರತ ಶುಕ್ರವಾರ ಕಳವಳ ವ್ಯಕ್ತಪಡಿಸಿದೆ.

‘ಕೆನಡಾ ರಾಯಭಾರ ಕಚೇರಿಗೆ ಹಾಗೂ ಅಲ್ಲಿನ ಸರ್ಕಾರಕ್ಕೆ ಭಾರತ ತನ್ನ ಕಳವಳವನ್ನು ವಿವರಿಸಿದೆ’ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ತಿಳಿಸಿದ್ದಾರೆ.

‘ಭಾರತ ವಿರೋಧಿ ಶಕ್ತಿಗಳಿಂದ ನಡೆಯಲಿರುವ ಜನಾಭಿಪ್ರಾಯ ಸಂಗ್ರಹಕ್ಕೆ ಸಂಬಂಧಿಸಿ ನಮ್ಮ ನಿಲುವು ಸ್ಪಷ್ಟವಾಗಿದ್ದು, ಕೆನಡಾ ಸರ್ಕಾರಕ್ಕೆ ತಿಳಿಸಿದ್ದೇವೆ. ಈ ಮಾಹಿತಿಯನ್ನು ನಾವು ಬಹಿರಂಗವಾಗಿಯೇ ಹಂಚಿಕೊಂಡಿದ್ದೇವೆ’ ಎಂದೂ ಅವರು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.