ನವದೆಹಲಿ: ದೇಶದ ವಿರುದ್ಧ ನಡೆಯುವ ಯಾವುದೇ ದಾಳಿ ಎದುರಿಸಲೂ ಭಾರತ ಸಂಪೂರ್ಣ ಸಿದ್ಧವಿದೆ ಎಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಪಂಜಾಬ್ನಖೇಮ್ಕರನ್ ಸೆಕ್ಟರ್ನಲ್ಲಿಭಾರತದ ಗಡಿ ಸಮೀಪ ಹಾರಾಟ ನಡೆಸುತ್ತಿದ್ದ ಪಾಕಿಸ್ತಾನದ ಡ್ರೋನ್ ಅನ್ನುಭಾರತೀಯ ವಾಯುಪಡೆ ಸೋಮವಾರ ಹಿಮ್ಮೆಟಿಸಿತ್ತು.
ಈ ಸಂಬಂಧ ಪ್ರತಿಕ್ರಿಯಿಸಿದ ನಿರ್ಮಲಾ, ‘ಪಾಕಿಸ್ತಾನ ನಡೆಸುವ ದಾಳಿಗಳಿಗೆ ತಕ್ಕ ಪ್ರತ್ಯುತ್ತರ ನೀಡಲು ನಮ್ಮ ಸೇನಾಪಡೆ ಸಿದ್ಧವಿದೆ ಎನ್ನುವುದಕ್ಕೆ ಇದು ಉದಾಹರಣೆ’ ಎಂದಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.