ADVERTISEMENT

ಕೋವಿಡ್ ಬೂಸ್ಟರ್ ಡೋಸ್ ಬಗ್ಗೆ ಯೋಚನೆ ಹೊಂದಿಲ್ಲ: ನೀತಿ ಆಯೋಗ

ಏಜೆನ್ಸೀಸ್
Published 14 ಅಕ್ಟೋಬರ್ 2021, 1:41 IST
Last Updated 14 ಅಕ್ಟೋಬರ್ 2021, 1:41 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ಈಗಿನ ಪರಿಸ್ಥಿತಿಯಲ್ಲಿ ದೇಶದಲ್ಲಿ ಕೋವಿಡ್-19 ಸೋಂಕಿಗೆ ಬೂಸ್ಟರ್ ಡೋಸ್ ನೀಡುವ ಕುರಿತು ಯಾವುದೇ ಯೋಜನೆ ಹೊಂದಿಲ್ಲ ಎಂದು ನೀತಿ ಆಯೋಗ ಹೇಳಿದೆ.

ಸರ್ಕಾರದ ಮುಖ್ಯ ಕೋವಿಡ್-19 ಸಲಹೆಗಾರರಾಗಿರುವ ಡಾ. ವಿನೋದ್ ಕೆ. ಪಾಲ್ ಅವರು, ಭಾರತವು 100 ಕೋಟಿ ಲಸಿಕೆ ನೀಡಿಕೆಯತ್ತ ಸಾಗುತ್ತಿದೆ. ಲಸಿಕೆ ಉತ್ಪಾದನೆ ಹೆಚ್ಚಿಸಲಾಗಿದೆ. ಹೀಗಾಗಿ ಬೂಸ್ಟರ್ ಡೋಸ್ ಪ್ರಸ್ತಾಪವಿಲ್ಲ ಎಂದು ಹೇಳಿದ್ದಾರೆ.

ಈಗ ದೇಶಕ್ಕೆ ಅಗತ್ಯವಿರುವಷ್ಟು ಪ್ರಮಾಣದಲ್ಲಿ ಲಸಿಕೆ ಉತ್ಪಾದನೆಯಾಗುತ್ತಿದ್ದು, ಇಲ್ಲಿ ಬಳಕೆಗೆ ಲಭ್ಯವಾದ ಬಳಿಕ, ಮುಂದಿನ ವರ್ಷದಿಂದ ರಫ್ತು ಮಾಡುವ ಗುರಿ ಇದೆ ಎಂದು ಡಾ. ವಿನೋದ್ ತಿಳಿಸಿದ್ದಾರೆ.

ADVERTISEMENT

ಈಗಾಗಲೇ ಜಾಗತಿಕವಾಗಿ ಇಸ್ರೇಲ್, ಫ್ರಾನ್ಸ್, ಇಟಲಿ ಮತ್ತು ಜರ್ಮನಿ ಸಹಿತ 15ಕ್ಕೂ ಅಧಿಕ ರಾಷ್ಟ್ರಗಳು ಹಿರಿಯ ನಾಗರಿಕರಿಗೆ ಕೋವಿಡ್ 19 ತಡೆಗೆ ಮೂರನೇ ಡೋಸ್ ಲಸಿಕೆ ನೀಡಲಾರಂಭಿಸಿವೆ.

ಆದರೆ ವಿಶ್ವ ಆರೋಗ್ಯ ಸಂಸ್ಥೆಯ ಸೂಚನೆ ಪ್ರಕಾರ, ಮೂರನೇ ಡೋಸ್ ಲಸಿಕೆ ನೀಡುವ ಕುರಿತಂತೆ ಯಾವುದೇ ಸ್ಪಷ್ಟ ಅಧಿಸೂಚನೆ ಲಭ್ಯವಾಗಿಲ್ಲ, ಹೀಗಾಗಿ ದೇಶದಲ್ಲಿ ಬೂಸ್ಟರ್ ಡೋಸ್ ಲಸಿಕೆ ನೀಡುವ ಬಗ್ಗೆ ಯೋಜನೆ ರೂಪಿಸಿಲ್ಲ ಎಂದು ನೀತಿ ಆಯೋಗ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.