ADVERTISEMENT

ಗಡಿ ರಹಿತ ಯುದ್ಧಕ್ಕೆ ಭಾರತ ಸಜ್ಜಾಗಲಿ: ರಾಹುಲ್ ಗಾಂಧಿ

ಪಿಟಿಐ
Published 9 ಮಾರ್ಚ್ 2021, 9:22 IST
Last Updated 9 ಮಾರ್ಚ್ 2021, 9:22 IST
ರಾಹುಲ್‌ ಗಾಂಧಿ
ರಾಹುಲ್‌ ಗಾಂಧಿ   

ನವದೆಹಲಿ: ದೇಶವು ಗಡಿರಹಿತ ಯುದ್ಧಕ್ಕೆ ಸನ್ನದ್ಧವಾಗಬೇಕಿದೆ ಎಂದು ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಹೇಳಿದ್ದಾರೆ.

ಭಾರತೀಯ ರಕ್ಷಣಾ ಪಡೆಗಳು 2.5 ಗಡಿಗಳಲ್ಲಿ (ದೇಶದ ಉತ್ತರ ಭಾಗದಲ್ಲಿ, ಪಶ್ಚಿಮ ಭಾಗದಲ್ಲಿ ಹಾಗೂ ಆಂತರಿಕ ಸಂಘರ್ಷದ ಸಂದರ್ಭದಲ್ಲಿ ಕಾರ್ಯಾಚರಣೆ ನಡೆಸುವುದಕ್ಕೆ ತಕ್ಕಂತೆ) ಹೋರಾಟ ನಡೆಸುವುದಕ್ಕಾಗಿವಿನ್ಯಾಸಗೊಂಡಿವೆ. ಆದರೆ, ಇದು ಈಗ ಅಪ್ರಸ್ತುತ. ಹಾಗಾಗಿ ನಾವು ಗಡಿರಹಿತ ಯುದ್ಧಕ್ಕೆ ಸಿದ್ಧರಾಗಬೇಕಿದೆ ಅವರು ಟ್ವೀಟ್‌ ಮಾಡಿದ್ದಾರೆ.

ಭಾರತ ಭೂ ಪ್ರದೇಶದ ಒಂದು ಇಂಚು ಜಾಗವನ್ನೂ ಕಳೆದುಕೊಂಡಿಲ್ಲ ಎಂದು ಸಂಸತ್ತಿನಲ್ಲಿ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು ಸ್ಪಷ್ಟಪಡಿಸಿದ ನಂತರವೂ ಕೇಂದ್ರ ಸರ್ಕಾರದ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ ಮುಂದುವರಿಸಿದ್ದು,ಭಾರತದ ನೆಲವನ್ನು ಚೀನಾಕ್ಕೆ ಬಿಟ್ಟುಕೊಡಲಾಗಿದೆ ಎಂದು ಆರೋಪಿಸುತ್ತಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.